OROP: ಸ್ವಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧನ ಅಂತ್ಯಕ್ರಿಯೆ

Published : Nov 03, 2016, 08:14 AM ISTUpdated : Apr 11, 2018, 01:10 PM IST
OROP: ಸ್ವಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧನ ಅಂತ್ಯಕ್ರಿಯೆ

ಸಾರಾಂಶ

ನಿವೃತ್ತ ಯೋಧ ರಾಮ್ ಕಿಶನ್ ಮೊನ್ನೆ ದೆಹಲಿಯ ಜಂತರ್ ಮಂತರ್’ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷ ಸೇವನೆಯಿಂದಲೇ ರಾಮ್ ಕಿಶನ್ ಸಾವನಪ್ಪಿದ್ದಾರೆ ಎಂದು ಮರಣೋತ್ತರ ವರದಿ ಧೃಡಪಡಿಸಿದೆ.

ನವದೆಹಲಿ (ನ.03):  ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅಂತ್ಯಕ್ರಿಯೆ ಇಂದು ಹರ್ಯಾಣದ ಭಿವಾನಿಯಲ್ಲಿ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಭೂಪಿಂದರ್ ಸಿಂಗ ಹೂಡಾ ಹಾಗೂ ಕಮಲ್ ನಾಥ್ ಮುಂತಾದ ರಾಜಕೀಯ ನಾಯಕರು ಕೂಡಾ ಭಾಗವಹಿಸಿದ್ದರು.

ನಿವೃತ್ತ ಯೋಧ ರಾಮ್ ಕಿಶನ್ ಮೊನ್ನೆ ದೆಹಲಿಯ ಜಂತರ್ ಮಂತರ್’ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷ ಸೇವನೆಯಿಂದಲೇ ರಾಮ್ ಕಿಶನ್ ಸಾವನಪ್ಪಿದ್ದಾರೆ ಎಂದು ಮರಣೋತ್ತರ ವರದಿ ಧೃಡಪಡಿಸಿದೆ.

ಮೃತ ಯೋಧನ ಕುಟುಂಬಸ್ಥರು ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಗ್ರೆವಾಲ್, ಸಮಾನ ಪಿಂಚಣಿ ವಿಚಾರದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ