ರಮೇಶ್ ಜಾರಕಿಹೊಳಿ ಸರ್ಕಾರ ಬೀಳಿಸಿದ್ದೇಕೆ? ಕಾರಣ ಬಿಚ್ಚಿಟ್ಟ ಸತೀಶ್!

Published : Sep 14, 2019, 08:33 AM IST
ರಮೇಶ್ ಜಾರಕಿಹೊಳಿ ಸರ್ಕಾರ ಬೀಳಿಸಿದ್ದೇಕೆ? ಕಾರಣ ಬಿಚ್ಚಿಟ್ಟ ಸತೀಶ್!

ಸಾರಾಂಶ

ಐಟಿ ಭಯದಿಂದ ರಮೇಶ್‌ ಮೈತ್ರಿ ಸರ್ಕಾರ ಬೀಳಿಸಿದ್ದಾರೆ: ಸತೀಶ್‌| ಬಿಜೆಪಿ ಸೇರಿಲ್ಲವೆಂದು ಡಿಕೆಶಿ ಮೇಲೆ ದ್ವೇಷದ ರಾಜಕಾರಣ

ಬೆಳಗಾವಿ[ಸೆ.14]: ಗೋಕಾಕ್‌ ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿಯಾಗಿತ್ತು. ಹೀಗಾಗಿ ಐಟಿ ತನಿಖೆ ಭಯದಿಂದ ರಮೇಶ್‌ ಮೈತ್ರಿ ಸರ್ಕಾರ ಪತನಗೊಳಿಸಿ, ಬಿಜೆಪಿ ಪರ ಬ್ಯಾಟ್‌ ಬೀಸುತ್ತಿದ್ದಾರೆ ಎಂದು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗಿಂತಲೂ ದೊಡ್ಡವರು ಬಿಜೆಪಿಯಲ್ಲಿದ್ದಾರೆ. ಎಷ್ಟೋ ಜನ ಕಾಂಗ್ರೆಸ್‌ ನಾಯಕರ ಮೇಲೆ ಪ್ರಕರಣಗಳಿದ್ದವು. ಅವರು ಬಿಜೆಪಿ ಸೇರ್ಪಡೆಯಾದ ಬಳಿಕ ಅವರ ಪ್ರಕರಣಗಳೆಲ್ಲವೂ ಇತ್ಯರ್ಥವಾಗಿವೆ ಎಂದು ಆರೋಪಿಸಿದರು.

ಈ ಹಿಂದೆ ಶಿವಕುಮಾರ್‌ ಅವರಿಗೆ ಬಿಜೆಪಿ ಸೇರಬೇಕೆಂಬ ಆಫರ್‌ ಬಂದಿತ್ತು. ಆದರೆ, ಅವರು ನಿರಾಕರಿಸಿದ್ದರಿಂದ ಅವರನ್ನು ರಾಜಕೀಯವಾಗಿ ಕಟ್ಟಿಹಾಕಿದ್ದಾರೆ. ಶಿವಕುಮಾರ್‌ ಅವರನ್ನು ಉದ್ದೇಶಪೂರ್ವಕವಾಗಿಯೇ ಗುರಿಯಾಗಿಸಲಾಗಿದೆ. ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

ಕಾರ್ಯಕರ್ತರ ಬಂಧನ, ಎಸ್‌ಪಿಗೆ ಪತ್ರ:

ಅನಾವಶ್ಯಕವಾಗಿ ಪೊಲೀಸರು ಗೋಕಾಕ್‌ ತಾಲೂಕಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಪತ್ರ ಬರೆದು ಗಮನ ಸೆಳೆದಿದ್ದೇನೆ. ಕಾಂಗ್ರೆಸ್‌ ಕಾರ್ಯಕರ್ತರನ್ನು ಗುರಿಯಾಗಿಸಿ ರಾಜಕೀಯ ಮಾಡಲಾಗುತ್ತಿದೆ. ಇಂತಹ ಘಟನೆಗಳು ಮರುಕ​ಳಿ​ಸಬಾರದು ಎಂಬ ಉದ್ದೇಶದಿಂದ ಎಸ್ಪಿಗೆ ಪತ್ರ ಬರೆದಿದ್ದೇನೆ ಎಂದರು.

ಕ್ಷೇತ್ರ​ದಲ್ಲಿ ಜನರ ಮೇಲೆ ರಮೇಶ್‌ ಜಾರಕಿಹೊಳಿ ಗುಲಾಮಗಿರಿ ನಡೆಸಿದ್ದು, ಗುಲಾಮಗಿರಿಯಿಂದ ಜನ​ರಿಗೆ ಮುಕ್ತಿ ಕೊಡಿಸಲು ಹೋರಾಟ ಮಾಡುತ್ತೇವೆ. ರಮೇಶ್‌ ಅವರ ಅಳಿಯ ಅಂಬಿರಾವ್‌ಗೆ ನಮ್ಮ ಬಗ್ಗೆ ಯಾವುದೇ ಭಯ ಇಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ