
ನವದೆಹಲಿ[ಅ.15]: ಸಾಮಾನ್ಯವಾಗಿ ರಾತ್ರಿಯ ವೇಳೆ ಮಳೆ ಹಾಗೂ ಮಂಜು ಕವಿದ ಸಂದರ್ಭದಲ್ಲಿ ರಸ್ತೆ ಅಪಘಾತಗಳು ಅಪಘಾತಕ್ಕೆ ಎಡೆ ಮಾಡಿಕೊಡುತ್ತವೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ಈ ನಂಬಿಕೆಗೆ ವ್ಯತಿರಿಕ್ತವಾಗಿ ಶೇ.70ರಷ್ಟು ಅಪಘಾತಗಳು ಹಾಡ ಹಗಲೇ ಸಂಭವಿಸಿವೆ ಎಂದು ಸರ್ಕಾರದ ವರದಿಯೊಂದು ತಿಳಿಸಿದೆ.
2017ರಲ್ಲಿ ಸಂಭವಿಸಿದ ಅಪಘಾತಗಳ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ವರದಿಯ ಪ್ರಕಾರ, ಭಾರೀ ಮಳೆ, ಮಂಜು ಕವಿದ ವಾತಾವರಣ, ಆಲಿಕಲ್ಲು ಮಳೆಯಂತಹ ವಿಷಮ ಪರಿಸ್ಥಿತಿಯಲ್ಲಿ ವಾಹನ ಚಲಾಯಿಸುವಾಗ ಶೇ.16ರಷ್ಟು ಅಪಘಾತಗಳು ಮಾತ್ರ ಸಂಭವಿಸಿವೆ.
ಸರ್ಕಾರದ ವರದಿಯಂತೆ, ಕಳೆದ ವರ್ಷ ಸಂಭವಿಸಿದ ಒಟ್ಟು 4.7 ಲಕ್ಷ ಅಪಘಾತ ಪ್ರಕರಣಗಳ ಪೈಕಿ 3.4 ಲಕ್ಷ ಅಪಘಾತಗಳು ಬೆಳಗಿನ ಸಂದರ್ಭದಲ್ಲಿ ಸಂಭವಿಸಿವೆ ಎಂದು ತಿಳಿದುಬಂದಿದೆ. 2017ರ ಅಪಘಾತದಲ್ಲಿ ಒಟ್ಟು 1.02 ಲಕ್ಷ ಮಂದಿ ಜೀವ ಕಳೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.