‘2019ರ ಲೋಕಸಭಾ ಚುನಾವಣೆಗೆ ಓವೈಸಿ, ಅಂಬೇಡ್ಕರ್ ಬಿಜೆಪಿಗೆ’

Published : Sep 17, 2018, 02:16 PM ISTUpdated : Sep 19, 2018, 09:28 AM IST
‘2019ರ ಲೋಕಸಭಾ ಚುನಾವಣೆಗೆ ಓವೈಸಿ, ಅಂಬೇಡ್ಕರ್ ಬಿಜೆಪಿಗೆ’

ಸಾರಾಂಶ

ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿವೆ. ಇದೇ ವೇಳೆ ಓವೈಸಿ ಹಾಗೂ ಪ್ರಕಾಶ್ ಅಂಬೇಡ್ಕರ್ ಬಿಜೆಪಿಯೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ಶಿವಸೇನೆ ಹೇಳಿದೆ. 

ಮುಂಬೈ :  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಚುನಾವಣೆಗಾಗಿ ವಿವಿಧ ಪಕ್ಷಗಳು ಸಕಲ ರೀತಿಯ ಸಿದ್ಧತೆಯಲ್ಲಿ ತೊಡಗಿವೆ. 

ಇದೇ ಸಂದರ್ಭದಲ್ಲಿ ಶಿವ ಸೇನೆಯ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿಯೊಂದಿಗೆ ಮಹಾರಾಷ್ಟ್ರದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಹಾಗೀ ಭಾರತೀಯ ಬಹುಜನ ಮಹಾ ಸಂಘದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಒಕ್ಕೂಟ ರಚನೆ ಮಾಡಲು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. 

ಈಗಾಗಲೇ ಈ ಇಬ್ಬರೂ ಕೂಡ ಬಿಜೆಪಿಯೊಂದಿಗೆ ಕೈ ಜೋಡಿಸುವುದಾಗಿ ಘೋಷಣೆ ಮಾಡಿದ್ದಾರೆ ಎಂದು ಸಾಮ್ನಾದ ಸಂಪಾದಕೀಯದಲ್ಲಿ  ಹೇಳಲಾಗಿದೆ. 

ಈ ಹಿಂದೆ ಬಿಜೆಪಿಗೆ ಬೆನ್ನ ಹಿಂದೆ ಬೆಂಬಲ ನೀಡಿದ್ದರು. ಆದರೆ ಈಗ ಬಹಿರಂಗವಾಗಿಯೇ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿಯೊಂದಿಗೆ ಕೈ ಜೋಡಿಸುವ ಮೂಲಕ 2019ರ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಸಜ್ಜಾಗಿದ್ದಾರೆ ಎಂದು ಹೇಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..
ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ