
ನವದೆಹಲಿ: ವಿರೋಧ ಪಕ್ಷದವರು ಸಂಸತ್ ಕಲಾಪವನ್ನು ಅಡ್ಡಿ ಪಡಿಸುತ್ತಿರುವ ನಡೆ ವಿರೋಧಿಸಿ ಪ್ರಧಾನಿ ಮೋದಿ ಗುರುವಾರದಂದು ಉಪವಾಸವನ್ನಾಚರಿಸಲಿದ್ದು, ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಟಾಂಗ್ ನೀಡಿದ್ದಾರೆ.
ಸುಳ್ಳು ಭರವಸೆಗಳು ನೀಡಿದ್ದಕ್ಕೆ, ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಾಗೂ ಉದ್ಯೋಗ ಸೃಷ್ಟಿಸಲು ವಿಫಲರಾಗಿರುವುದಕ್ಕೆ ಯಾಕೆ ಪ್ರಧಾನಿ ಮೋದಿ ಉಪವಾಸ ಕೈಗೊಂಡಿಲ್ಲವೆಂದು ಒವೈಸಿ ಪ್ರಶ್ನಿಸಿದ್ದಾರೆ.
ಉಪವಾಸ ಆಚರಿಸುವುದಿದ್ದರೆ ರೈತರ ಆತ್ಮಹತ್ಯೆಗಳಿಗೆ, ಹೆಣ್ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಕ್ಕೆ ಪ್ರಾಯಶ್ಚಿತವಾಗಿ ಪ್ರಧಾನಿ ಮೋದಿ ಉಪವಾಸ ಆಚರಿಸಿವುದಿಲ್ಲವೆಂದು ಒವೈಸಿ ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷದವರು ಸಂಸತ್ ಕಲಾಪವನ್ನು ಅಡ್ಡಿ ಪಡಿಸುತ್ತಿರುವ ನಡೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಏ.12) ರಂದು ಒಂದು ದಿನದ ಉಪವಾಸ ಕೈಗೊಳ್ಳುತ್ತಿದ್ದಾರೆ.
ಪ್ರಧಾನಿಯವವರು ಉಪವಾಸ ಕೈಗೊಂಡರೂ ನಿತ್ಯದ ಕಚೇರಿ ಕಾರ್ಯಚಟುವಟಿಕೆಗಳಿಗೆ ಯಾವುದೇ ಕುಂದುಂಟಾಗುವುದಿಲ್ಲ. ಎಂದಿನಂತೆ ಕಡತಗಳ ವಿಲೇವಾರಿಗಳನ್ನು ಪರಿಶೀಲಿಸಲಿದ್ದಾರೆ. ಸಾರ್ವಜನಿಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಅಲ್ಲದೆ ನಾಳೆ ಜ್ಯೋತಿಬಾಫುಲೆ ಜನ್ಮದಿನಾಚರಣೆ ಪ್ರಯುಕ್ತ ವಿಡಿಯೋ ಕಾನ್ಫೆರನ್ಸ್ ಮೂಲಕ ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.