
ಪಿಟಿಐ ಹೈದರಾಬಾದ್: ಮೇ 12ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಸದ ಅಸಾದುದ್ದೀನ್ ಒವೈಸಿ ಅವರ ಅಖಿಲ ಭಾರತ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಪಕ್ಷ ಸ್ಪರ್ಧಿಸಲಿದೆ.
‘ನಾವು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ. ಆದರೆ ಎಷ್ಟುಸ್ಥಾನಗಳು ಎಂಬ ಬಗ್ಗೆ ಇನ್ನೂ ನಿರ್ಣಯವಾಗಿಲ್ಲ’ ಎಂದು ಪಕ್ಷದ ಮೂಲಗಳು ಮಂಗಳವಾರ ಹೇಳಿವೆ. ‘ನಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ’ ಎಂದೂ ಅವು ಸ್ಪಷ್ಟಪಡಿಸಿವೆ.
ತೆಲಂಗಾಣ ವಿಧಾನಸಭೆಯಲ್ಲಿ ಒವೈಸಿ ಪಕ್ಷದ 7 ಶಾಸಕರಿದ್ದಾರೆ. ಒವೈಸಿ ಪಕ್ಷ ಸ್ಪರ್ಧಿಸಿದರೆ ಮುಸ್ಲಿಂ ಮತಗಳು ವಿಭಜನೆಯಾಗಿ ತನ್ನ ಜಯಕ್ಕೆ ಅಡ್ಡಿಯಾಗಬಹುದು ಎಂಬುದು ಕಾಂಗ್ರೆಸ್ ಪಕ್ಷದ ಆತಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.