ಚಿದಂಬರಂ ಪ್ರತ್ಯಕ್ಷ: ಕೇಂದ್ರ ಆಟ ಆಡ್ತಿದೆಯಂತೆ ಪರೋಕ್ಷ!

Published : Aug 21, 2019, 08:57 PM IST
ಚಿದಂಬರಂ ಪ್ರತ್ಯಕ್ಷ: ಕೇಂದ್ರ ಆಟ ಆಡ್ತಿದೆಯಂತೆ ಪರೋಕ್ಷ!

ಸಾರಾಂಶ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| 27 ಗಂಟೆಗಳ ಬಳಿಕ ಪ್ರತ್ಯಕ್ಷರಾದ ಪಿ.ಚಿದಂಬರಂ| ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪಿ.ಚಿದಂಬರಂ ಸುದ್ದಿಗೋಷ್ಠಿ| ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ಮಾಜಿ ಕೇಂದ್ರ ಸಚಿವ| ‘ಈ ನೆಲದ ಕಾನೂನಿನ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ’| ‘ನಾನು ತಪ್ಪಿಸಿಕೊಂಡು ಹೋಗಿರುವುದಾಗಿ ಮಾಧ್ಯಮಗಳಿಂದ ಸುಳ್ಳು ಸುದ್ದಿ’|

ನವದೆಹಲಿ(ಆ.21): ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ಮಧ್ಯೆ ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ಪಿ.ಚಿದಂಬರಂ ಇಂದು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದು, ತುರ್ತು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಇದೇ ವೇಳೆ ತಾವು ಪರಾರಿಯಾಗಿರುವುದಾಗಿ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿದ್ದು, ತಾವು ಕೇವಲ ನ್ಯಾಯಕ್ಕಾಗಿ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದಾಗಿ ತಿಳಿಸಿದರು.

ಈ ನೆಲದ ಕಾನೂನಿನ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದ್ದು, ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪಿ.ಚಿದಂಬರಂ ಸ್ಪಷ್ಟಪಡಿಸಿದರು.

ಇನ್ನು ಪ್ರಕರಣದಲ್ಲಿ ತಮ್ಮನ್ನು ಸಿಕ್ಕಿ ಹಾಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ ಚಿದಂಬರಂ, ಸ್ವಾತಂತ್ರ್ಯ ಮತ್ತು ಆತ್ಮ ಗೌರವದ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

40ನೇ ವಯಸ್ಸಿನಲ್ಲಿ ಉದ್ಯೋಗ ಕಳೆದುಕೊಂಡ ಕಾರ್ಪೊರೇಟ್ ಉದ್ಯೋಗಿ ಹಂಚಿಕೊಂಡ 3 ಮುಖ್ಯ ಜೀವನ ಪಾಠಗಳು
ಆಗಸ್ಟ್ 15, 2026: ಇದು ಭಾರತದ 79ನೇಯೋ ಅಥವಾ 80ನೇ ಸ್ವಾತಂತ್ರ್ಯ ದಿನಾಚರಣೆಯೋ? ಗೊಂದಲಕ್ಕೆ ಇಲ್ಲಿದೆ ಉತ್ತರ!