ಐಎನ್ಎಕ್ಸ್ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಚಿದಂಬರಂ

Published : Jun 06, 2018, 03:23 PM IST
ಐಎನ್ಎಕ್ಸ್ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಚಿದಂಬರಂ

ಸಾರಾಂಶ

ಐಎನ್ಎಕ್ಸ್ ಮಿಡಿಯ ಹಗರಣ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಕಗ್ಗಂಟಾಗಿ ಪರಿಣಮಿಸುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇಂದು ಚಿದಂಬರಂ ಸಿಬಿಐ ಕೇಂದ್ರ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದರು.

ನವದೆಹಲಿ(ಜೂ.6): ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಇಂದು ಸಿಬಿಐ ಕೇಂದ್ರ ಕಚೇರಿಗೆ ವಿಚಾರಣೆಗಾಗಿ ಹಾಜರಾದರು. ಐಎನ್ಎಕ್ಸ್ ಮೀಡಿಯಾದ ವಿದೇಶಿ ಹೂಡಿಕೆಗೆ ಅನುಮತಿ ನೀಡಿದ ವಿಚಾರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಚಿದಂಬರಂ ಅವರನ್ನು ವಿಚಾರಣೆ ನಡೆಸುತ್ತಿದೆ.

ಸುಮಾರು 305 ಕೋಟಿ ರೂಪಾಯಿಗಳ ವಿದೇಶಿ ಹೂಡಿಕೆ ಪ್ರಚಾರ ಮಂಡಳಿಗೆ ಅನುಮತಿ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿದಂಬರಂ ಪಾತ್ರವಿದೆ ಎನ್ನಲಾಗಿದ್ದು, ಐಎನ್ಎಕ್ಸ್ ಮೀಡಿಯಾದ ಪ್ರವರ್ತಕರು ಮಾಜಿ ಮಾಧ್ಯಮ ಪ್ರಚಾರಕ ಪೀಟಕ್ ಮುಖರ್ಜಿ ಹಾಗೂ ಇಂದ್ರಾಣಿ ಮುಖರ್ಜಿ ಆಗಿದ್ದಾರೆ.

ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಅನುಮತಿ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಮತ್ತು ಯುಪಿಎ-1 ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಇದರಲ್ಲಿ ಭಾಗಿಯಾಗಿದ್ದರು ಎಂದು ಕಳೆದ ವರ್ಷ ಮೇ 15ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.

ಮೀಡಿಯಾಗೆ ಅನುಮತಿ ನೀಡಿ ಸುಮಾರು 10 ಲಕ್ಷ ರೂಪಾಯಿ ಲಂಚ ಪಡೆದಿದ್ದರು ಎಂದು ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರು ಕೂಡ ಈ ಕೇಸಿಗೆ ಸಂಬಂಧಪಟ್ಟಂತೆ ಬಂಧಿಯಾಗಿದ್ದರು. ಐಎನ್ಎಕ್ಸ್ ಮೀಡಿಯಾದ ಅಂದಿನ ನಿರ್ದೇಶಕ ಇಂದ್ರಾಣಿ ಮುಖರ್ಜಿ, ನ್ಯೂಸ್ ನಿರ್ದೇಶಕ ಪೀಟರ್ ಮುಖರ್ಜಿ ಪ್ರಕರಣದ ಇತರ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ತಮ್ಮ ಪುತ್ರಿ ಶೀನಾ ಬೋರಾ ಹತ್ಯೆಗೆ ಸಂಬಂಧಪಟ್ಟಂತೆ ಜೈಲು ಸೇರಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!