
ನವದೆಹಲಿ[ಜು.19]: ಕೇಂದ್ರೀಯ ತನಿಖಾ ದಳ ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಪಾಟಿಯಾಲ ಹೌಸ್ ಕೋರ್ಟ್'ಗೆ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ.
ಚಿದಂಬರಂ ಒಳಗೊಂಡಂತೆ ಸರ್ಕಾರಿ ಅಧಿಕಾರಿಗಳು ಸೇರಿ 17 ಮಂದಿಯ ಹೆಸರು ಆರೋಪಪಟ್ಟಿಯಲ್ಲಿ ದಾಖಲಾಗಿದೆ. ವಿದೇಶಿ ಹೂಡಿಕೆ ಪ್ರಚಾರ ಮಂಡಳಿಯಲ್ಲಿ ಹಣ ಹೂಡಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ದಾಖಲಿಸಲಾಗಿದೆ.
ಈಗಾಗಲೇ ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಬರಂ ಹೆಸರನ್ನು ದಾಖಲಿಸಲಾಗಿದೆ. ಕಾರ್ತಿ ಅವರನ್ನು ಫೆ.28ರಂದು ಬಂಧಿಸಲಾಗಿದ್ದು ಜಾಮೀನಿನ ಮೇಲೆ ಹೊರಗಿದ್ದಾರೆ.
ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಚಿದಂಬರಂ ಅವರು 2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಏರ್ ಸೆಲ್ - ಮ್ಯಾಕ್ಸಿಸ್ ಒಪ್ಪಂದದಲ್ಲಿ ವಿದೇಶಿ ಹೂಡಿಕೆ ಪ್ರಮಾಣಪತ್ರ ನೀಡಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.