
ನವದೆಹಲಿ[ಅ.18]: ಐಎನ್ಎಕ್ಸ್ ಮಿಡಿಯಾ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂರನ್ನು ಅ.24ರ ವರೆಗೆ ಇಡಿ ಕಸ್ಟಡಿಗೆ ನೀಡಿ ದೆಹಲಿ ನ್ಯಾಯಾಲಯ ಅದೇಶ ನೀಡಿದೆ.
ಪ್ರತ್ಯೇಕ ಸೆಲ್, ಮನೆ ಊಟ, ವೆಸ್ಟರ್ನ್ ಶೌಚಾಲಯ, ಔಷಧ ಹಾಗೂ ಪ್ರತೀ ದಿನ ವಕೀಲರೊಂದಿಗೆ ಕುಟುಂಬಸ್ಥರನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದ್ದು, ಪ್ರತೀ 48 ಗಂಟೆಗಳಿಗೊಮ್ಮೆ ಚಿದಬಂರಂ ಆರೋಗ್ಯ ತಪಾಸಣೆ ಮಾಡಬೇಕು ಎಂದು ಇಡಿಗೆ ಕೋರ್ಟ್ ಸೂಚನೆ ನೀಡಿದೆ.
ಇಡಿ ವಶಕ್ಕೆ ಪಡೆದುಕೊಂಡಿದ್ದರಿಂದ ಚಿದಂಬರಂ ತಿಹಾರ್ ಜೈಲು ವಾಸ ತಾತ್ಕಾಲಿಕವಾಗಿ ಅಂತ್ಯವಾಗಿದ್ದು, ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಇದೇ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿದ್ದ ಚಿದಂಬರಂ ಅವರನ್ನು ಬುಧವಾರ ಇಡಿ ಅಲ್ಲೇ ಬಂಧಿಸಿ ವಿಚಾರಣೆ ನಡೆಸಿತ್ತು. ಇದೇ ವೇಳೆ ಸಿಬಿಐ ಪ್ರಕರಣದಲ್ಲಿ ಅ.24ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.