
ನವದೆಹಲಿ(ಸೆ.05): ಮಹತ್ವದ ಬೆಳವಣಿಗೆಯೊಂದರಲ್ಲಿ ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ದೆಹಲಿಯ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.
ಪ್ರಕರಣ ಸಂಬಂಧ ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅಲ್ಲದೇ ಚಿದಂಬರಂ ಅವರನ್ನು ತಿಹಾರ್ ಜೈಲಿನ ವಿಶೇಷ ಕೊಠಡಿಯಲ್ಲಿಡಲು ಸೂಚಿಸಿದೆ.
ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ, ಪುತ್ರನಿಗೆ ಜಾಮೀನು:
ಇನ್ನು ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿಗೆ ದೆಹಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪಿ.ಚಿದಂಬರಂ ಮತ್ತು ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಪ್ರಕರಣ ದಾಖಲಿಸಿತ್ತು. ವಿಶೇಷ ಜಡ್ಜ್ ಒಪಿ ಸೈನಿ ಚಿದಂಬರಂ ಮತ್ತು ಅವರ ಪುತ್ರನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ತಲಾ ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್ ನೀಡುವುದರ ಜೊತೆಗೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.