
ನವದೆಹಲಿ(ಆ.16): ಪ್ರಧಾನಿ ಮೋದಿ ಅವರ ಕಟು ಟೀಕಾಕಾರರಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಇದೇ ಮೊದಲ ಬಾರಿಗೆ ಮೋದಿ ಅವರ ನಿಲುವು ಬಂಬಲಿಸಿ ಅಚ್ಚರಿ ಮೂಡಿಸಿದ್ದಾರೆ.
ಸ್ವಾತಂತ್ರ್ಯೋತ್ಸವ ನಿಮಿತ್ತ ಪ್ರಧಾನಿ ಮೋದಿ ಕೆಂಪುಕೋಟೆಯಿಂದ ಮಾಡಿದ ಭಾಷಣದ ಪ್ರಮುಖ ಮೂರು ಸಂಗತಿಯನ್ನು ಪಿ.ಚಿದಂಬರಂ ಬೆಂಬಲಿಸಿದ್ದಾರೆ.
ಜನಸಂಖ್ಯಾ ನಿಯಂತ್ರಣ, ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಸಂಪತ್ತು ಸೃಷ್ಟಿಸುವವರನ್ನು ಗೌರವಿಸಬೇಕು ಎಂಬ ಮೋದಿ ಅವರ ವಿಚಾರಧಾರೆಗಳನ್ನು ಚಿದಂಬರಂ ಮೆಚ್ಚಿ, ಗುಣಗಾನ ಮಾಡುವುದರ ಜೊತೆಗೆ ಬಹಿರಂಗವಾಗಿ ಸ್ವಾಗತಿಸಿದ್ದಾರೆ.
ದೇಶದ ಪ್ರಗತಿಗೆ ಜನಸಂಖ್ಯಾ ನಿಯಂತ್ರಣಕ್ಕೆ ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿಲುವು ಅತ್ಯಂತ ಸಮಂಜಸ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಅದರಂತೆ ಪ್ಲಾಸ್ಟಿಕ್ ನಿರ್ಮೂಲನೆಗೆ ಮೋದಿ ಕೊಟ್ಟಿರುವ ಕರೆಯನ್ನು ಬೆಂಬಲಿಸುವುದಾಗಿ ಚಿದಂಬರಂ ತಿಳಿಸಿದ್ದಾರೆ. ಪರಿಸರ ರಕ್ಷಣೆಗಾಗಿ ತುರ್ತಾಗಿ ಪ್ಲಾಸ್ಟಿಕ್ ನಿಷೇಧವಾಗಬೇಕಿದ್ದು, ಮೋದಿ ಕರೆ ಸಕಾಲಿಕ ಎಂದು ಅವರು ನುಡಿದಿದ್ದಾರೆ.
ಅಲ್ಲದೇ ಸಂಪತ್ತು ಸೃಷ್ಟಿಸುವವರನ್ನು ಗೌರವಿಸಬೇಕೆಂಬ ಮೋದಿ ಮಾತು ನಿಜ ಎಂದಿರುವ ಚಿದಂಬರಂ, ದೇಶದ ಪ್ರಗತಿಯಲ್ಲಿ ಉದ್ಯಮಿಗಳ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಸಹಮತ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.