
ತಿರುವನಂತಪುರ: ಕೇರಳದ ಪ್ರಸಿದ್ಧ ಅನಂತಪದ್ಮನಾಭ ದೇಗುಲದ ರಹಸ್ಯ ಕೋಣೆಗಳಲ್ಲಿ ದೊರೆತ ಸುಮಾರು 300 ಕೋಟಿ ರು. ಮೌಲ್ಯದ ಚಿನ್ನಾಭರಣಗಳು, ಸಂಪತ್ತನ್ನು ಸಾರ್ವ ಜನಿಕ ಪ್ರದರ್ಶನಕ್ಕಿಡುವ ಪ್ರಸ್ತಾಪವೊಂದನ್ನು ಕೇರಳ ಹಾಗೂ ಕೇಂದ್ರ ಸರ್ಕಾರಗಳ ಮುಂದೆ ಸಲ್ಲಿಸಲಾಗಿದೆ. ಈ ಪ್ರಸ್ತಾಪಕ್ಕೆ ಉಭಯ ಸರ್ಕಾರಗಳು ಒಪ್ಪಿಗೆ ಸೂಚಿಸಿವೆ.
ಆದರೆ ಇದಕ್ಕೆ ದೇಗುಲದ ವ್ಯವಹಾರ ಗಳನ್ನು ನಿರ್ವಹಿಸುವ ತಿರುವಾಂಕೂರು ರಾಜಮನೆತನ ಹಾಗೂ ಸುಪ್ರೀಂ ಕೋರ್ಟ್ ಒಪ್ಪಿದರೆ ಸಾರ್ವಜನಿಕ ಪ್ರದರ್ಶನಕ್ಕೆ ಅನುಕೂಲ ಕಲ್ಪಿಸಲು ತಾವು ಸಿದ್ಧ ಎಂದು ಉಭಯ ಸರ್ಕಾರಗಳು ಸ್ಪಷ್ಟಪಡಿಸಿವೆ.
ಕೇರಳದ ವಾಣಿಜ್ಯೋದ್ಯಮ ಒಕ್ಕೂಟ ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪ್ರಸ್ತಾಪ ಇರಿಸಿದೆ. ಕವಾಟಗಳಲ್ಲಿ ದೊರೆತ ಸಂಪತ್ತನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಿದರೆ ವರ್ಷಕ್ಕೆ ಪ್ರವಾಸಿಗರಿಂದ 50 ಕೋಟಿ ರು. ಆದಾಯ ಗಳಿಸಬಹುದು. ಪ್ರವಾಸೋದ್ಯಮ ವನ್ನು ಅಭಿವೃದ್ಧಿಪಡಿಸಿದಂತಾಗುತ್ತದೆ ಎಂದು ವಾಣಿಜ್ಯೋದ್ಯಮ ಒಕ್ಕೂಟದ ಆಶಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.