26/11 ದಾಳಿಯ ಕೈವಾಡ ಪಾಕ್ ಸರ್ಕಾರದಲ್ಲ, ಉಗ್ರರದ್ದು

Published : Mar 06, 2017, 12:58 PM ISTUpdated : Apr 11, 2018, 01:01 PM IST
26/11 ದಾಳಿಯ ಕೈವಾಡ ಪಾಕ್ ಸರ್ಕಾರದಲ್ಲ, ಉಗ್ರರದ್ದು

ಸಾರಾಂಶ

ಮುಂಬೈ ದಾಳಿಯಲ್ಲಿ ಭಾರತೀಯ ಸೇನೆಗೆ ಜೀವಂತ ಸಿಕ್ಕ ದಾಳಿಕೋರ ಅಜ್ಮಲ್ ಕಸಬ್' ಪಾಕ್ ನಾಗರಿಕ ಎಂದು ಮಾಧ್ಯಮಗಳಿಗೆ ತಿಳಿಸಿದ ಪರಿಣಾಮ ದುರಾನಿಯನ್ನು ಪಾಕ್ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸ್ಥಾನದಿಂದ ಪದಚ್ಯುತಗೊಳಿಸಲಾಗಿತ್ತು.

ನವದೆಹಲಿ(ಮಾ.06):ಮುಂಬೈನಲ್ಲಿ 26/11ರಲ್ಲಿ ನಡೆದ ದಾಳಿ ಪಾಕ್'ನಲ್ಲಿರುವ ಉಗ್ರಗಾಮಿ ಗುಂಪುಗಳ ಕೈವಾಡವೇ ಹೊರತು ಪಾಕ್ ಸರ್ಕಾರ ಭಾಗಿಯಾಗಿಲ್ಲ ಎಂದು ಪಾಕ್'ನ ಮಾಜಿ ಭದ್ರತಾ ಸಲಹೆಗಾರ ಮಹಮೊದ್ ಅಲಿ ದುರಾನಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ರಕ್ಷಣಾ ಅಧ್ಯಯನ ಹಾಗೂ ವಿಶ್ಲೇಷಣಾ ಸಂಸ್ಥೆಯು ಆಯೋಜಿಸಿದ್ದ ಭಯೋತ್ಪಾನೆ ಕುರಿತಾದ ಸಮಾವೇಶದಲ್ಲಿ ಮಾತನಾಡಿ,ಮುಂಬೈ'ನಲ್ಲಿ ನಡೆದ 26/11ರ ಭೀಕರ ದಾಳಿಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ದಾಳಿಯ ರುವಾರಿ ಲಷ್ಕರ್ ಇ ತೊಯ್ಬಾದ ಮುಖ್ಯಸ್ಥ ಹಫೀಜ್ ಸಯ್ಯದ'ನ ವಿರುದ್ಧ ಪಾಕ್  ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಮುಂಬೈ ದಾಳಿಯಲ್ಲಿ ಭಾರತೀಯ ಸೇನೆಗೆ ಜೀವಂತ ಸಿಕ್ಕ ದಾಳಿಕೋರ ಅಜ್ಮಲ್ ಕಸಬ್' ಪಾಕ್ ನಾಗರಿಕ ಎಂದು ಮಾಧ್ಯಮಗಳಿಗೆ ತಿಳಿಸಿದ ಪರಿಣಾಮ ದುರಾನಿಯನ್ನು ಪಾಕ್ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸ್ಥಾನದಿಂದ ಪದಚ್ಯುತಗೊಳಿಸಲಾಗಿತ್ತು.

ದುರಾನಿ ಅವರು ಪಾಕ್'ನ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದ ಸಂದರ್ಭದಲ್ಲಿ ನವೆಂಬರ್ 26, 2008ರಲ್ಲಿ 10 ಪಾಕ್ ಉಗ್ರರು ದೋಣಿಯ ಮೂಲಕ ಮುಂಬೈಗೆ ಆಗಮಿಸಿ ವಿದೇಶಿಯರು ಒಳಗೊಂಡು 166 ಭಾರತೀಯರನ್ನು ಕೊಂದಿದ್ದರು. ಆದರೆ ಭಾರತೀಯ ಕಮಾಂಡೊಗಳು 10 ಉಗ್ರರಲ್ಲಿ 9 ಕೊಂದು ಅಜ್ಮಲ್ ಕಸಬ್'ನನ್ನು ಮಾತ್ರ ಜೀವಂತ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ತದ ನಂತರ ಆತನನ್ನು 2012ರಲ್ಲಿ ಗಲ್ಲಿಗೇರಿಸಲಾಗಿತ್ತು.     

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ