ಪಾಕ್ ತನ್ನ ದುರ್ಬುದ್ಧಿ ಬಿಡದಿದ್ದರೆ 10 ಹೋಳಾಗುತ್ತದೆ: ರಾಜನಾಥ್ ಸಿಂಗ್ ಎಚ್ಚರಿಕೆ

Published : Dec 11, 2016, 10:08 AM ISTUpdated : Apr 11, 2018, 12:36 PM IST
ಪಾಕ್ ತನ್ನ ದುರ್ಬುದ್ಧಿ ಬಿಡದಿದ್ದರೆ 10 ಹೋಳಾಗುತ್ತದೆ: ರಾಜನಾಥ್ ಸಿಂಗ್ ಎಚ್ಚರಿಕೆ

ಸಾರಾಂಶ

ಶಾಹಿದ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ರಾಜನಾಥ್ ಸಿಂಗ್, ಗಡಿಭಾಗದಲ್ಲಿ ಪಾಕಿಸ್ತಾನದ ತಂಟೆಯನ್ನು ಭಾರತ ಎಳ್ಳಷ್ಟೂ ಸಹಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಜಮ್ಮು(ಡಿ. 11): ಗಡಿ ನಿಯಮ ಉಲ್ಲಂಘನೆ ಮತ್ತು ಭಯೋತ್ಪಾದನೆಯನ್ನು ಪಾಕಿಸ್ತಾನ ಕೈಬಿಡದೇ ಹೋದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತನ್ನ ದುರ್ಬುದ್ಧಿಯನ್ನು ಮುಂದುವರಿಸಿದರೆ 10 ಹೋಳುಗಳಾಗುವುದನ್ನು ನೋಡಬೇಕಾಗುತ್ತದೆ ಎಂದವರು ಹೇಳಿದ್ದಾರೆ.

"ಇದೂವರೆಗೆ ಪಾಕಿಸ್ತಾನ ಎರಡು ಹೋಳಾಗಿ(ಬಾಂಗ್ಲಾದೇಶ) ವಿಭಜಿತವಾಗಿದೆ. ಇನ್ನೂ ಪಾಠ ಕಲಿಯದೇ ಹೋದರೆ 10 ಭಾಗವಾಗಿ ವಿಭಜಿತವಾಗಬೇಕಾಗುತ್ತದೆ," ಎಂದು ರಾಜನಾಥ್ ಸಿಂಗ್ ವಿವರಿಸಿದ್ದಾರೆ.

ಪಾಕಿಸ್ತಾನದ ನೆಲವನ್ನು ಆಕ್ರಮಿಸುವ ಯಾವುದೇ ಇರಾದೆ ಭಾರತಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ರಾಜನಾಥ್ ಸಿಂಗ್, "ಬೇರೆ ದೇಶವನ್ನು ಆಕ್ರಮಿಸುವ ಉದ್ದೇಶವಿಲ್ಲದ ಏಕೈಕ ರಾಷ್ಟ್ರವೆಂದರೆ ಭಾರತ. ನಾವು ವಿಸ್ತರಣಾವಾದಿಗಳಲ್ಲ. ಇಡೀ ವಿಶ್ವವೇ ಒಂದು ಕುಟುಂಬ ಎಂದೆನ್ನುವ ವಸುಧೈವ ಕುಟುಂಬಕಮ್ ಎಂಬ ಸಂದೇಶವನ್ನು ವಿಶ್ವಕ್ಕೆ ಕೊಟ್ಟಿರುವ ಸಂಸ್ಕೃತಿ ನಮ್ಮದು" ಎಂದು ಹೇಳಿದ್ದಾರೆ.

ಶಾಹಿದ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ರಾಜನಾಥ್ ಸಿಂಗ್, ಗಡಿಭಾಗದಲ್ಲಿ ಪಾಕಿಸ್ತಾನದ ತಂಟೆಯನ್ನು ಭಾರತ ಎಳ್ಳಷ್ಟೂ ಸಹಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

"ಗಡಿಯಲ್ಲಿ ಮೊದಲು ಗುಂಡು ಹಾರಿಸಬಾರದು ಎಂದು ನಮ್ಮ ಸೇನೆಗೆ ತಿಳಿಸಿದ್ದೇನೆ. ಆದರೆ, ಪಾಕಿಸ್ತಾನದಿಂದ ಮೊದಲ ಗುಂಡು ಹಾರಿ ಬಂದರೆ, ಎದುರಾಳಿಗಳ ಎದೆ ಸೀಳಲು ಎಷ್ಟು ಬೇಕಾದರೂ ಗುಂಡುಗಳನ್ನು ಬಳಸಲು ಹಿಂದೆಮುಂದೆ ನೋಡಬೇಡಿ ಎಂದು ತಿಳಿಸಿದ್ದೇನೆ," ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಯೋತ್ಪಾದನೆ ಎನ್ನುವುದು ವೀರರ ಕೆಲಸವಲ್ಲ, ಬದಲಾಗಿ ಅದು ಹೇಡಿಗಳ ಹೇಡಿತನದ ಕೃತ್ಯ ಎಂದು ಈ ವೇಳೆ ಗೃಹ ಸಚಿವರು ಪಾಕಿಸ್ತಾನದ ಉಗ್ರ ಮುಖವಾಡವನ್ನು ಖಂಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ