
ಜಮ್ಮು (ಫೆ. 23): 40 ಮಂದಿ ಯೋಧರ ಸಾವಿಗೆ ಕಾರಣವಾದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ಎರಗಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆಯಲ್ಲಿ ಶಂಕಾಸ್ಪದ ನಡವಳಿಕೆ ಪ್ರದರ್ಶಿಸುತ್ತಿದೆ. ಒಂದು ವೇಳೆ ಭಾರತ ಏನಾದರೂ ಯುದ್ಧ ಸಾರಿದರೆ, ಅದನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಆರಂಭಿಸಿದೆ.
ಭಾರತೀಯ ಯೋಧರು ದಾಳಿಗೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ತನ್ನ ಸೈನಿಕರಿಗೆ ಪಾಕಿಸ್ತಾನ ಸೂಚನೆ ನೀಡಿದೆ. ಸೇನಾಧಿಕಾರಿಗಳು ಹಾಗೂ ಸೇನಾ ಪಡೆಗಳ ರಜೆಗಳನ್ನು ಏಕಾಏಕಿ ರದ್ದುಗೊಳಿಸಿದೆ. ಸೇನಾ ಸಲಕರಣೆಗಳನ್ನು ಗಡಿಭಾಗಕ್ಕೆ ಸಾಗಣೆ ಮಾಡುತ್ತಿದೆ. ಗಡಿ ನಿಯಂತ್ರಣಾ ರೇಖೆಯಲ್ಲಿರುವ ಗ್ರಾಮಸ್ಥರನ್ನು ತೆರವುಗೊಳಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಗುಂಪಾಗಿ ಓಡಾಡದಂತೆ ರಾತ್ರಿಯ ವೇಳೆ ಅನಗತ್ಯವಾಗಿ ದೀಪಗಳನ್ನು ಬೆಳಗದಂತೆ ಜನರಿಗೆ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಬಲೂಚಿಸ್ತಾನದ ಕ್ವೆಟ್ಟಾಸರಕು ಸಾಗಣೆ ಪ್ರಾಂತ್ಯದಲ್ಲಿರುವ ಜಿಲಾನಿ ಆಸ್ಪತ್ರೆಗೆ ಫೆ.20ರಂದು ಪತ್ರವೊಂದನ್ನು ಬರೆದಿರುವ ಪಾಕಿಸ್ತಾನ ಸೇನೆ, ಭಾರತದ ಜೊತೆ ಯುದ್ಧ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವೈದ್ಯಕೀಯ ಸಲಕರಣೆಗಳು ಲಭ್ಯವಿರುವಂತೆ ನೋಡಿಕೊಳ್ಳುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.