
ಇಸ್ಲಾಮಾಬಾದ್(ಜು.16): ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾ ಪಡೆಯ ನಿವೃತ್ತಿ ಅಧಿಕಾರಿ ಕುಲಭೂಷಣ್ ಜಾಧವ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಕುರಿತು ಪಾಕ್ ಸೇನಾ ಮುಖ್ಯಸ್ಥ ಜನರಲ್ ಖ್ವಾಮರ್ ಜಾವೇದ್ ಬಜ್ವಾ ಪರಿಶೀಲನೆ ನಡೆಸಿದ್ದಾರೆ.
ಬಜ್ವ ಅವರು ಜಾಧವ್ ಅವರು ಗಲ್ಲು ಶಿಕ್ಷೆ ವಿಧಿಸಲು ಸಲ್ಲಿಸಲಾಗಿದ್ದ ಸಾಕ್ಷ್ಯಗಳು ಹಾಗೂ ಕ್ಷಮಾದಾನ ಕೋರಿದ್ದಕ್ಕೆ ಸಲ್ಲಿಸಿರುವ ಸಾಕ್ಷಗಳನ್ನು ಪರೀಶೀಲನೆ ನಡೆಸುತ್ತಿದ್ದು,ಇದನ್ನು ಆಧರಿಸಿ ಬಜ್ವಾ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಮಿಲಿಟರಿ ಕೋರ್ಟ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಬಳಿಕ ಬಜ್ವಾ ಅವರ ಮುಂದೆ ಕಳೆದ ತಿಂಗಳು ಜಾಧವ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ.
ಪಾಕಿಸ್ತಾನ ಮಿಲಿಟರಿ ಕೊರ್ಟ್ ಜಾಧವ್ ಅವರಿಗೆ ಏಪ್ರಿಲ್ನಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಹೇಗ್ನ ಅಂತಾರಾಷ್ಟ್ರೀಯ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿದ ಕಾರಣ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀರ್ವ ಮುಖಭಂಗಕ್ಕೀಡಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.