
ಇಸ್ಲಾಮಾಬಾದ್[ಆ.07]: ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ನಿರ್ಧಾರವನ್ನು ಕಾನೂನುಬಾಹಿರ, ಅಸಾಂವಿಧಾನಿಕ ಎಂದಿದ್ದ ಪಾಕಿಸ್ತಾನ, ಇದೀಗ ಕಾಶ್ಮೀರ ಮತ್ತು ಅಲ್ಲಿನ ಜನರಿಗಾಗಿ ನಮ್ಮ ಸೇನೆ ಏನು ಬೇಕಾದರೂ ಮಾಡಲು ಸಿದ್ಧವಾಗಿದೆ ಎಂದು ಗುಡುಗಿದೆ.
ಭಾರತದ ಇತರೆ ರಾಜ್ಯಗಳಂತೆ ಕಾಶ್ಮೀರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದಶಕಗಳಿಂದಲೂ ಇಲ್ಲಿ ನಡೆಯುತ್ತಿರುವ ಪ್ರತ್ಯೇಕತಾವಾದವನ್ನು ದಮನ ಮಾಡಲು ಭಾರತ ಸರ್ಕಾರ ಈ ತಂತ್ರ ಅನುಸರಿಸಿದೆ.
ಆದರೆ, ಇಲ್ಲಿನ ಕಾಶ್ಮೀರಿಗರಿಗೆ ಸಹಾಯ ಮಾಡಲು ಪಾಕ್ ಸೇನೆ ಸದಾ ಸಿದ್ಧವಾಗಿದೆ. ಅಲ್ಲಿನ ಜನರ ಹಿತರಕ್ಷಣೆಗಾಗಿ ಯಾವ ಬೆಲೆ ತೆರಲೂ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಇಲ್ಲಿ ಮಂಗಳವಾರ ನಡೆದ ಸೈನಿಕರ ಸಮ್ಮೇಳನದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.