ಭಾರತದೊಂದಿಗೆ ಹದಗೆಡುತ್ತಿರುವ ಸಂಬಂಧ; ವಿಶ್ವಸಂಸ್ಥೆ ಮೊರೆ ಹೋದ ಪಾಕ್

Published : Dec 07, 2016, 01:09 PM ISTUpdated : Apr 11, 2018, 12:42 PM IST
ಭಾರತದೊಂದಿಗೆ ಹದಗೆಡುತ್ತಿರುವ ಸಂಬಂಧ; ವಿಶ್ವಸಂಸ್ಥೆ ಮೊರೆ ಹೋದ ಪಾಕ್

ಸಾರಾಂಶ

ಭಾರತ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಇದರ ಜೊತೆಗೆ ಕಾಶ್ಮೀರದಲ್ಲಿ ಭಾರತೀಯ ಪಡೆಗಳು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕ್ ದೂರಿದೆ.

ವಿಶ್ವಸಂಸ್ಥೆ(ಡಿ.07): ಉಭಯ ರಾಷ್ಟ್ರಗಳ ನಡುವೆ ಹದಗೆಟ್ಟಿರುವ ಸಂಬಂಧವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯು ನೈತಿಕ ಜವಾಬ್ದಾರಿಯ ಮೇರೆಗೆ ಮಧ್ಯಪ್ರವೇಶಿಸಬೇಕಂದು ಪಾಕಿಸ್ತಾನ ವಿಶ್ವಸಂಸ್ಥೆಗೆ ಮನವಿ ಮಾಡಿದೆ.  

ಭಾರತವು ಪಾಕ್‌'ನೊಂದಿಗಿನ ಸಂಬಂಧಕ್ಕೆ ತೆರೆ ಎಳೆದಿದೆ. ಉಭಯ ರಾಷ್ಟ್ರಗಳ ಗಡಿಯಲ್ಲಿ ಶಾಂತಿ ನೆಲೆಸುವಂತೆ ಮಾಡಲು ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು ಎಂದು ಪಾಕ್ ಹೇಳಿದೆ.

ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ವ್ಯವಹಾರ ವಿಶೇಷ ಸಹಾಯಕ ಸೈಯದ್ ತಾರಿಕ್ ತೆಮಿ ಅವರು ವಿಶ್ವಸಂಸ್ಥೆಯ ಕಾರ್ಯದರ್ಶಿ ಅಂಟೋನಿ ಗುಟ್ಟೇರ್ಸ್, ಉಪ ಕಾರ್ಯದರ್ಶಿ ಜಾನ್ ಎಲಿಸ್ಸನ್ ಮತ್ತು ಉಪ ಕಾರ್ಯದರ್ಶಿ ಜೆಫ್ರಿ ಫಾಲ್ಟ್‌ಮನ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ.

ಭಾರತ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಇದರ ಜೊತೆಗೆ ಕಾಶ್ಮೀರದಲ್ಲಿ ಭಾರತೀಯ ಪಡೆಗಳು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕ್ ದೂರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ
ಹೂವಿನಹಡಗಲಿ: ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ?