ಪಾಕ್‌ಗೆ ಪೂರ್ಣ ಪ್ರಮಾಣದ ಯುದ್ಧ ಮಾಡಲು ಸಾಧ್ಯವೇ ಇಲ್ಲ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್

Published : Jul 27, 2019, 01:18 PM ISTUpdated : Jul 27, 2019, 01:27 PM IST
ಪಾಕ್‌ಗೆ ಪೂರ್ಣ ಪ್ರಮಾಣದ ಯುದ್ಧ  ಮಾಡಲು ಸಾಧ್ಯವೇ ಇಲ್ಲ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ಸಾರಾಂಶ

ಪಾಕ್‌ನಿಂದ ಪೂರ್ಣ ಯುದ್ಧ ಮಾಡಲು ಆಗದು: ರಾಜನಾಥ್‌| ಅದಕ್ಕಾಗಿಯೇ ಪರೋಕ್ಷ ಸಮರ ಸಾರಿದೆ| ಸಂಸತ್ತಲ್ಲಿ ಕಾರ್ಗಿಲ್‌ ವೀರರಿಗೆ ನಮನ

ನವದೆಹಲಿ[ಜು.27]: ಭಾರತದ ವಿರುದ್ಧ ನೆರೆಯ ಪಾಕಿಸ್ತಾನಕ್ಕೆ ಪೂರ್ಣ ಪ್ರಮಾಣ ಅಥವಾ ಸೀಮಿತವಾದ ಯುದ್ಧ ಮಾಡಲು ಸಾಧ್ಯವೇ ಇಲ್ಲ. ಅದಕ್ಕಾಗಿಯೇ ಭಾರತದ ಮೇಲೆ ಪರೋಕ್ಷ ಯುದ್ಧ ಮಾಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಹೇಳಿದ್ದಾರೆ.

ಕಾರ್ಗಿಲ್‌ ವಿಜಯದ 20ನೇ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಹುತಾತ್ಮ ವೀರ ಯೋಧರಿಗೆ ಶುಕ್ರವಾರ ಲೋಕಸಭೆಯಲ್ಲಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜನಾಥ್‌, ಯೋಧರ ಬಲಿದಾನ ಹಾಗೂ ಅವರ ಕೆಚ್ಚೆದೆಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಇತರ ಲೋಕಸಭಾ ಸದಸ್ಯರು ಕಲಾಪದಲ್ಲಿ ಹಾಜರಿದ್ದರು. ಈ ವೇಳೆ ಮಾತನಾಡಿದ ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಅಧಿರ್‌ ರಂಜನ್‌ ಅವರು, ಕಾರ್ಗಿಲ್‌ ಯುದ್ಧದ ಕುರಿತು ವಿಸ್ತೃತ ಚರ್ಚೆ ನಡೆಯಬೇಕು ಎಂದು ಪ್ರತಿಪಾದಿಸಿದರು.

ಇನ್ನು ರಾಜ್ಯಸಭೆಯಲ್ಲೂ ಸಹ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯನಾಯ್ಡು ಅವರು, ಕಾರ್ಗಿಲ್‌ ಯುದ್ಧದಲ್ಲಿ ಕೆಚ್ಚೆದೆಯಿಂದ ಹೋರಾಡಿದ ಭಾರತೀಯ ಯೋಧರ ಧೈರ್ಯ ಮತ್ತು ಸಾಹಸದ ಬಗ್ಗೆ ಹೆಮ್ಮೆಪಟ್ಟರು. ಅಲ್ಲದೆ, ರಾಜ್ಯಸಭೆ ಸದಸ್ಯರೆಲ್ಲರೂ ಎದ್ದು ನಿಂತು ಮೌನಚಾರಣೆ ಮೂಲಕ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 9.67 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಅಸ್ತು
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌