ಪರ್ವೇಜ್ ಮುಶ್ರಫ್ ವಿರುದ್ಧ ಬಂಧನ ವಾರೆಂಟ್ ಜಾರಿ

Published : Nov 28, 2016, 02:32 PM ISTUpdated : Apr 11, 2018, 12:38 PM IST
ಪರ್ವೇಜ್ ಮುಶ್ರಫ್ ವಿರುದ್ಧ ಬಂಧನ ವಾರೆಂಟ್ ಜಾರಿ

ಸಾರಾಂಶ

ಬಲೂಚಿಸ್ತಾನದ ರಾಷ್ಟ್ರೀಯತಾವಾದಿ ನವಾಬ್ ಅಕ್ಬರ್ ಭುಗ್ತಿ ಹತ್ಯೆ ಆರೋಪ ಎದುರಿಸುತ್ತಿರುವ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷ್ರಫ್ ವಿರುದ್ಧ ಅಲ್ಲಿನ ಸ್ಥಳೀಯ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಇಸ್ಲಮಾಬಾದ್ (ನ.28): ಬಲೂಚಿಸ್ತಾನದ ರಾಷ್ಟ್ರೀಯತಾವಾದಿ ನವಾಬ್ ಅಕ್ಬರ್ ಭುಗ್ತಿ ಹತ್ಯೆ ಆರೋಪ ಎದುರಿಸುತ್ತಿರುವ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷ್ರಫ್ ವಿರುದ್ಧ ಅಲ್ಲಿನ ಸ್ಥಳೀಯ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಹತ್ಯೆಯಾದ ಅಕ್ಬರ್ ಭುಗ್ತಿ ಮಗ ಜಾಮಿಲ್ ಭುಗ್ತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ನ್ಯಾ.ಜಾಮಲ್ ಮಂಡೋಕಿಲ್ ಹಾಗೂ ಜಹೀರುದ್ದೀನ್ ಕಾಕರ್ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿದೆ.

ಭದ್ರತಾ ಕಾರಣದಿಂದ ಪರ್ವೇಜ್ ಮುಷ್ರಫ್ ನ್ಯಾಯಾಲಯ ವಿಚಾರಣೆಗೆ ಹಾಜರಾಗಲಿಲ್ಲ. ಅವರ ಪರ ವಕೀಲರಾದ ಅಕ್ತರ್ ಶಾ ಹಾಜರಾಗಿದ್ದರು. ಸಾಕಷ್ಟು ಬಾರಿ ಆದೇಶ ನೀಡಿದ್ದರೂ ಸಹ ಮುಷ್ರಫ್ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಭುಗ್ತಿ ಪರ ವಕೀಲ ಆರೋಪಿಸಿದ್ದಾರೆ. ಇದನ್ನು ಪರಿಗಣಿಸಿರುವ ನ್ಯಾಯಾಲಯ ಪರ್ವೇಜ್ ಅವರು ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಷ್ರಫ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ; ಕಿಡಗೇಡಿಗಳ ಕೃತ್ಯಕ್ಕೆ ಆಕ್ರೋಶ
ಪಂಜದಿಂದ ಒಂದು ಹೊಡೆದ ಹುಲಿ, ಸಿಬ್ಬಂದಿ ಸಣ್ಣಹೈದ ಬಲಿ; ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಭರವಸೆ ಕೊಟ್ಟ ಇಲಾಖೆ!