
ಇಸ್ಲಾಮಾಬಾದ್[ಮಾ.16]: ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ್ದ ‘ಚಾಂಪಿಯಲ್ ಆಫ್ ಅರ್ಥ್’ ಪ್ರಶಸ್ತಿ ಹಿಂಪಡೆಯುವಂತೆ ಪಾಕಿಸ್ತಾನ ಸರ್ಕಾರ ವಿಶ್ವಸಂಸ್ಥೆಗೆ ಪತ್ರ ಬರೆದಿದೆ. ಪ್ರಧಾನಿ ಇಮ್ರಾನ್ ಖಾನ್ ಅವರ ಸಲಹೆಗಾರ ಮಲಿಕ್ ಅಮಿನ್ ಅಸ್ಲಾಮ್ ಇದನ್ನು ಬರೆದಿದ್ದು, ಬಾಲಾಕೋಟ್ ಮೇಲೆ ವಾಯುದಾಳಿ ನಡೆಸುವ ಮೂಲಕ ಮೋದಿ ಪರಿಸರ ಭಯೋತ್ಪಾದನೆ ನಡೆಸಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿರುವ ‘ಚಾಂಪಿಯನ್ ಆಫ್ ಅರ್ಥ್’ ಪ್ರಶಸ್ತಿ ವಾಪಸ್ ಪಡೆಯಬೇಕು ಎಂದು ಕೋರಿದ್ದಾರೆ.
ಪರಿಸರ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಕೈಗೊಂಡಿರುವ ಕ್ರಮಗಳನ್ನು ಗುರುತಿಸಿ ವಿಶ್ವಸಂಸ್ಥೆ ಕಳೆದ ವರ್ಷ ಈ ಪ್ರಶಸ್ತಿ ನೀಡಿತ್ತು. ಇತ್ತೀಚೆಗೆ ಬಾಲಾಕೋಟ್ನಲ್ಲಿ ಭಾರತದ ಯುದ್ಧವಿಮಾನಗಳು ದಾಳಿ ನಡೆಸಿ ಪೈನ್ ಮರಗಳನ್ನು ನಾಶಗೊಳಿಸಿವೆ ಎಂದು ಪಾಕಿಸ್ತಾನ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.