ಭಾರತದ ರಾಷ್ಟ್ರಪತಿ ವಿಮಾನ ಹಾರಾಟಕ್ಕೆ ಪಾಕ್ ನಿರ್ಬಂಧ!

Published : Sep 07, 2019, 05:54 PM IST
ಭಾರತದ ರಾಷ್ಟ್ರಪತಿ ವಿಮಾನ ಹಾರಾಟಕ್ಕೆ ಪಾಕ್ ನಿರ್ಬಂಧ!

ಸಾರಾಂಶ

ಭಾರತದ ವಿರುದ್ಧ ಮತ್ತೆ ಉದ್ಘಟತನ ಮೆರೆದ ಪಾಕಿಸ್ತಾನ| ಭಾರತದ ರಾಷ್ಟ್ರಪತಿ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಣೆ| ರಾಮನಾಥ್ ಕೋವಿಂದ್ ವಿಮಾನ ತನ್ನ ವಾಯುಗಡಿ ಪ್ರವೇಶಿಸಲು ಪಾಕ್ ನಿರ್ಬಂಧ| ಮೂರು ರಾಷ್ಟ್ರಗಳ ಪ್ರವಾಸ ಹೊರಡಲಿರುವ ರಾಮನಾಥ್ ಕೋವಿಂದ್| ‘ಯಾವುದೇ ಭಾರತೀಯ ಅಥವಾ ಭಾರತೀಯ ವಿಮಾನ ತನ್ನ ವಾಯುಗಡಿ ಪ್ರವೇಶಿಸಲು ಬಿಡುವುದಿಲ್ಲ’|

ನವದೆಹಲಿ(ಸೆ.07): ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಭಾರತದೊಂದಿಗೆ ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ಮೆರೆದಿದೆ. 

ತನ್ನ ವಾಯುಗಡಿಯಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಮಾನ ಹಾರಾಟಕ್ಕೆ ಪಾಕಿಸ್ತಾನ ಅನುಮತಿ ನಿರಾಕರಿಸಿದೆ. 

ರಾಷ್ಟ್ರಪತಿ ಕೋವಿಂದ್ ಐಸ್’ಲ್ಯಾಂಡ್, ಸ್ವಿಟ್ಜರ್’ಲ್ಯಾಂಡ್ ಹಾಗೂ ಸ್ಲೊವೇನಿಯಾ ರಾಷ್ಟ್ರಗಳ ಪ್ರವಾಸಕ್ಕೆ ತೆರಳಲಿದ್ದು, ಅವರ ವಿಮಾನ ಪ್ರಯಾಣಕ್ಕಾಗಿ ಭಾರತ ಸರ್ಕಾರ ಪಾಕಿಸ್ತಾನದ ವಾಯುಗಡಿ ಬಳಕೆ ಮಾಡಲು ಅನುಮತಿ ಕೇಳಿತ್ತು. 

ಆದರೆ ಕೋವಿಂದ್ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಿಸಿರುವ ಪಾಕ್, ಯಾವುದೇ ಭಾರತೀಯ ಅಥವಾ ಭಾರತೀಯ ವಿಮಾನ ತನ್ನ ವಾಯುಗಡಿ ಪ್ರವೇಶಿಸಲು ಬಿಡುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹ್ಮದ್ ಖುರೇಷಿ, ಭಾರತದ ಇತ್ತೀಚಿಗಿನ ಕಾಶ್ಮೀರ ನಡೆ ಅತ್ಯಂತ ಹೇಯವಾದದ್ದು ಎಂದು ಕಿಡಿಕಾರಿದ್ದಾರೆ.

ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ್ದ ಬಾಲಾಕೋಟ್ ವಾಯುದಾಳಿ ಬೆನ್ನಲ್ಲೇ ಪಾಕಿಸ್ತಾನ ತನ್ನ ವಾಯುಗಡಿಯನ್ನು ಭಾರತಕ್ಕೆ ನಿರ್ಬಂಧಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ