ಭಾರತೀಯ ಅಧಿಕಾರಿಯನ್ನು ಹೊರಹಾಕಿದ ಪಾಕಿಸ್ತಾನ

Published : Oct 28, 2016, 04:50 AM ISTUpdated : Apr 11, 2018, 12:38 PM IST
ಭಾರತೀಯ ಅಧಿಕಾರಿಯನ್ನು ಹೊರಹಾಕಿದ ಪಾಕಿಸ್ತಾನ

ಸಾರಾಂಶ

ಇಸ್ಲಾಮಬಾದ್’ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಸುರ್ಜಿತ್ ಸಿಂಗ್’ರನ್ನು ಕುಟುಂಬ ಸಮೇತ ಪಾಕಿಸ್ತಾನ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ.

ನವದೆಹಲಿ (ಅ.28): ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಪಾಕಿಸ್ತಾನಿ ಹೈಕಮಿಷನ್ ಕಚೇರಿ ಅಧಿಕಾರಿಯನ್ನು ಭಾರತವು ಹೊರದೂಡಿದ ಬೆನ್ನಲ್ಲೇ, ಪಾಕಿಸ್ತಾನವು ಕೂಡಾ ಭಾರತೀಯ ಅಧಿಕಾರಿಯೊಬ್ಬರನ್ನು ಪಾಕಿಸ್ತಾನ ಬಿಟ್ಟು ಹೋಗುವಂತೆ ಸೂಚಿಸಿದೆ.

ಇಸ್ಲಾಮಬಾದ್’ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಸುರ್ಜಿತ್ ಸಿಂಗ್’ರನ್ನು ಕುಟುಂಬ ಸಮೇತ ಪಾಕಿಸ್ತಾನ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ.

ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ನಿನ್ನೆ ಪಾಕಿಸ್ತಾನಿ ಅಧಿಕಾರಿ ಮೆಹಮೂದ್ ಅಖ್ತರ್ ಎಂಬವರನ್ನು ಭಾರತ ಬಿಟ್ಟು ಹೋಗುವಂತೆ ಸೂಚಿಸಲಾಗಿತ್ತು.

ಪಾಕಿಸ್ತಾನ ಕ್ರಮಕ್ಕೆ ಭಾರತ ಖಂಡನೆ:

ಪಾಕಿಸ್ತಾನಸದ ಕ್ರಮವನ್ನು ಖಂಡಿಸಿರುವ ವಿದೇಶಾಂಗ ವ್ಯವಹಾರ ಇಲಾಖೆಯು, ಪಾಕಿಸ್ತಾನವು ಯಾವುದೇ ಸಕಾರಣ ನೀಡದೇ ಭಾರತೀಯ ಅಧಿಕಾರಿಯನ್ನು ಹೊರಹಾಕಿದೆ. ಆ ಮೂಲಕ ಪಾಕಿಸ್ತಾನವು ಭಾರತ-ವಿರೋಧಿ ನೀತಿಯನ್ನು ಮುಂದುವರೆಸಿದೆ, ಎಂದು ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mann Ki Baat: 2025 ಭಾರತದ ಆತ್ಮವಿಶ್ವಾಸ ಹೆಚ್ಚಿಸಿದ ವರ್ಷ; ದುಬೈ 'ಕನ್ನಡ ಪಾಠಶಾಲೆ'ಗೆ ಪ್ರಧಾನಿ ಮೋದಿ ಶ್ಲಾಘನೆ!
ಪಿಎಫ್ to ಆದಾಯ ತೆರಿಗೆ, ಹೊಸ ವರ್ಷದಿಂದ ಬದಲಾವಣೆಯಾಗುತ್ತಿರುವ ಹಣದ ನಿಯಮ