ವಿಶ್ವಸಂಸ್ಥೆ ವೇದಿಕೆ: ಸುಷ್ಮಾ ರೌದ್ರಾವತಾರಕ್ಕೆ ‘ಪಡೋಸಿ’ ಗಡಗಡ!

Published : Sep 30, 2018, 11:27 AM ISTUpdated : Sep 30, 2018, 05:51 PM IST
ವಿಶ್ವಸಂಸ್ಥೆ ವೇದಿಕೆ: ಸುಷ್ಮಾ ರೌದ್ರಾವತಾರಕ್ಕೆ ‘ಪಡೋಸಿ’ ಗಡಗಡ!

ಸಾರಾಂಶ

ವಿಶ್ವಸಂಸ್ಥೆಯಲ್ಲಿ ಪಾಕ್ ಬೆವರಿಳಿಸಿದ ಸುಷ್ಮಾ ಸ್ವರಾಜ್! ಸುಷ್ಮಾ ಭಾಷಣದ ವೈಖರಿಗೆ ಪಾಕಿಸ್ತಾನ ಗಡಗಡ! ಭಯೋತ್ಪಾದನೆ ಕುರಿತ ಪಾಕ್ ನೀತಿ ವಿಶ್ವಕ್ಕೆ ಮನದಟ್ಟು! ತಮ್ಮ ಭಾಷಣದಲ್ಲಿ ಪಾಕ್ ಮುಖವಾಡ ಕಳಚಿದ ವಿದೇಶಾಂಗ ಸಚಿವೆ

ನ್ಯೂಯಾರ್ಕ್(ಸೆ.30): ಭಾರತದ ಇನ್ನು ಸುಮ್ಮನೆ ಕೂರಲ್ಲ ಎಂಬ ಸಂದೇಶ ಪಡೋಸಿ ಪಾಕಿಸ್ತಾನಕ್ಕೆ ಹೋಗಿ ವರ್ಷಗಳೇ ಸಂದಿವೆ. ವಿಶ್ವದ ಪ್ರಮುಖ ವೇದಿಕೆಗಳಲ್ಲಿ ಪಾಕಿಸ್ತಾನದ ಮುಖವಾಡ ಕಳಚಲು ಸಿಗುವ ಯಾವುದೇ ಅವಕಾಶವನ್ನು ಭಾರತ ಮಿಸ್ ಮಾಡಿಕೊಳ್ಳುವುದಿಲ್ಲ.

ಅದರಂತೆ ವಿಶ್ವಸಂಸ್ಥೆಯ 73 ನೇ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿದ್ದು, ನಿರಂತರ ಎಚ್ಚರಿಕೆಯ ಹೊರತಾಗಿಯೂ ಮೊಂಡುತನ ಪ್ರದರ್ಶಿಸುತ್ತಿರುವ ಪಾಕಿಸ್ತಾನವನ್ನು ಹಿಗ್ಗಾ ಮುಗ್ಗಾ ಝಾಡಿಸಿದ್ದಾರೆ.

ಭಯೋತ್ಪಾದನೆ, ಹವಾಮಾನ ಬದಲಾವಣೆ, ಸಮರ್ಥನೀಯ ಅಭಿವೃದ್ಧಿ ಗುರಿಗಳು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಆಗಬೇಕಿರುವ ಬದಲಾವಣೆ ಬಗ್ಗೆ ಮಾತನಾಡಿರುವ ಸುಷ್ಮಾ ಸ್ವರಾಜ್, ವಸುದೈವ ಕುಟುಂಬಕಂ ಎಂಬುದು ಭಾರತದ ತತ್ವ. ಇಡಿ ವಿಶ್ವ ಒಂದೇ ಕುಟುಂಬವಿದ್ದಂತೆ ಹಾಗೂ ಆ ಕುಟುಂಬದಲ್ಲಿ ಪರಸ್ಪರ ಸಂವೇದನೆಯಿರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ. 

ಪಾಕಿಸ್ತಾನವನ್ನು ತಮ್ಮ ಭಾಷಣದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡ, ಸುಷ್ಮಾ ಸ್ವರಾಜ್, ಪಾಕಿಸ್ತಾನ ಒಂದೆಡೆ ಭಾರತದೊಂದಿಗೆ ಮಾತುಕತೆ ನಡೆಸಬೇಕು ಎನ್ನುತ್ತಿದೆ. ಮತ್ತೊಂದೆಡೆ ಗಡಿ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಸುಷ್ಮಾ ಕಿಡಿ ಕಾರಿದರು.

ಇದೇ ವೇಳೆ ಭಾರತದ ಸಾಧನೆಗಳ ಬಗ್ಗೆಯೂ ಮಾತನಾಡಿರುವ ಸುಷ್ಮಾ ಸ್ವರಾಜ್, ಭಾರತ ವಿಶ್ವಸಂಸ್ಥೆಯ ಅಜೆಂಡಾಗಳು ವಿಫಲವಾಗುವುದಕ್ಕೆ ಎಂದಿಗೂ ಬಿಡುವುದಿಲ್ಲ ಎಂದು ಭರವಸೆ ನೀಡಿದರು.

2030 ಕ್ಕೆ ನಿಗದಿಯಾಗಿರುವ ಗುರಿಯನ್ನು ತಲುಪಲು ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿರುವ ವೇಗ ನೋಡಿದರೆ ಗುರಿಯನ್ನು ನಿಗದಿಗಿಂತಲೂ ಮುಂಚೆಯೇ ಪೂರ್ಣಗೊಳಿಸುವ ಸೂಚನೆ ನೀಡುತ್ತಿದ್ದು, ನಾವು ಗುರಿಯನ್ನು ತಲುಪುವುದಕ್ಕೆ ಸುಸಜ್ಜಿತವಾಗಿದ್ದೇವೆ ಎಂದು ಸುಷ್ಮಾ ಸ್ವರಾಜ್ ವಿಶ್ವಕ್ಕೆ ಭರವಸೆ ನೀಡಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ