
ಇಸ್ಲಾಮಾಬಾದ್(ಸೆ.30): ಇದೇ ನವೆಂಬರ್ 9 ರಂದು ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕಿಸ್ತಾನ ಆಹ್ವಾನಿಸಿದೆ.
ಸಿಖ್ ಸಮುದಾಯವನ್ನು ಪ್ರತಿನಿಧಿಸುವ ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುತ್ತಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಹೇಳಿದ್ದಾರೆ.
ಕಾರಿಡಾರ್ ಉದ್ಘಾಟನಾ ಸಮಾರಂಭ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಮೂರು ದಿನಗಳ ಮೊದಲು ನಡೆಯಲಿದ್ದು, ಎರಡೂ ದೇಶಗಳನ್ನು ಬೆಸೆಯುವ ಆಶಾವಾದ ಮೂಡಿಸಿದೆ.
ಆದರೆ ಪಾಕ್ ಸರ್ಕಾರದ ಆಹ್ವಾನವನ್ನು ಸ್ಪಷ್ಟವಾಗಿ ತಿರಿಸ್ಕರಿಸಿರುವ ಡಾ. ಮನಮೋಹನ್ ಸಿಂಗ್, ಪಾಕಿಸ್ತಾನಕ್ಕೆ ಹೋಗಲು ಕಾಲ ಪಕ್ವವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಪಾಕಿಸ್ತಾನದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ 20 ಡಾಲರ್ ಹಣವನ್ನು ಸೇವಾ ಶುಲ್ಕವನ್ನಾಗಿ ಪಡೆಯುವ ಪಾಕ್ ಕ್ರಮವನ್ನು ಮರುಪರಿಶೀಲಿಸುವಂತೆ ಭಾರತ ಸರ್ಕಾರ ಮನವಿ ಮಾಡಿದೆ.
ಆರಂಭದಲ್ಲಿ, ಭಾರತದಿಂದ ಪ್ರತಿದಿನ 5,000 ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅವಕಾಶವಿರುತ್ತದೆ ಆದರೆ ನಂತರ ದಿನಕ್ಕೆ 10,000 ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.