ಕಾಶ್ಮೀರಿ ಮಕ್ಕಳು ಶಾಲೆಗೆ ಹೋಗಲಿ ಎಂದ ಮಲಾಲ: ಶೋಭಾ ಸವಾಲಿಗೆ ವಿಲವಿಲ!

By Web DeskFirst Published Sep 15, 2019, 7:05 PM IST
Highlights

‘ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಹೋಗಬೇಕು’|ಪಾಕಿಸ್ತಾನದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸಫ್ ಝಾಯಿ ಒತ್ತಾಸೆ| ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಮರಳುವಂತೆ ವಿಶ್ವಸಂಸ್ಥೆ ನೆರವಾಗಬೇಕು ಎಂದ ಮಲಾಲ| ‘ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘ ಕಾಲದವರೆಗೆ ಶಾಲಾ-ಕಾಲೇಜುಗಳು ಮುಚ್ಚಿವೆ’| ವಿಶ್ವಸಂಸ್ಥೆ ಕಾಶ್ಮೀರಿಗಳ ಧ್ವನಿ ಕೇಳಬೇಕಿದೆ ಎಂದ ಮಲಾಲ| ಮಲಾಲ ಪಾಕ್’ನ ಅಲ್ಪಸಂಖ್ಯಾತ ಮಕ್ಕಳ ಕುರಿತು ಚಿಂತಿಸಲಿ ಎಂದ ಶೋಭಾ ಕರಂದ್ಲಾಜೆ|

ಇಸ್ಲಾಬಾಮಾದ್(ಸೆ.15): ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಮರಳಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫ್ ಝಾಯಿ ಒತ್ತಾಯಿಸಿದ್ದಾರೆ.

ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕಳೆದ ಆಗಸ್ಟ್ 5 ರಿಂದಲೂ ಅಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಶಾಲಾ, ಕಾಲೇಜುಗಳು ಮುಚ್ಚಲ್ಪಟ್ಟಿವೆ ಎಂದು ಮಲಾಲ ಖೇದ ವ್ಯಕ್ತಪಡಿಸಿದ್ದಾರೆ.

I am deeply concerned about reports of 4,000 people, including children, arbitrarily arrested & jailed, about students who haven’t been able to attend school for more than 40 days, about girls who are afraid to leave their homes.

— Malala (@Malala)

ಕಾಶ್ಮೀರಿಗಳ ಧ್ವನಿಗಳನ್ನು ಕೇಳಬೇಕಾಗಿದ್ದು, ಅಲ್ಲಿನ ಮಕ್ಕಳು ಸುರಕ್ಷಿತವಾಗಿ ಮರಳಿ ಶಾಲೆಗೆ ಹೋಗುವಂತಾಗಬೇಕು ಎಂದು ಮಲಾಲ ವಿಶ್ವಸಂಸ್ಥೆಗೆ ಮನವಿ ಮಾಡಿಕೊಂಡಿದ್ದಾಗಿ ಟ್ವೀಟ್ ಮಾಡಿದ್ದಾರೆ.

Sincere request to the Nobel winner, to spend some time speaking with the minorities of Pakistan.

To speak against the forceful conversation & persecution taking place on the minority girls in her own country!

Developmental agendas got extended to Kashmir, nothing suppressed! https://t.co/Um3BmGuJwi

— Shobha Karandlaje (@ShobhaBJP)

ಇನ್ನು ಮಲಾಲ ಟ್ವೀಟ್’ಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಮಲಾಲ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಮಕ್ಕಳ ಕುರಿತು ಇದೇ ಕಾಳಜಿ ವಹಿಸಲಿ ಎಂದು ಸವಾಲೆಸೆದಿದ್ದಾರೆ. 

click me!