
ಇಸ್ಲಾಮಾಬಾದ್(ನ.2): ಸೇಡಿನ ಕ್ರಮ ಅನುಸರಿಸುತ್ತಿರುವ ಪಾಕಿಸ್ತಾನವು ತಮ್ಮ ದೇಶದಲ್ಲಿ ವಿಧ್ವಂಸಕ ಚಟುವಟಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳಿಗೆ ದೇಶ ಬಿಡಲು ಸೂಚಿಸಿದೆ. ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ವಾಣಿಜ್ಯ ಸಲಹೆಗಾರ ರಾಜೇಶ್ ಅಗ್ನಿಹೋತ್ರಿ ಹಾಗೂ ಮಾಧ್ಯಮ ಸಲಹೆಗಾರ ಬಲಬೀರ್ ಸಿಂಗ್ ಅವರನ್ನು ಮಾತೃ ದೇಶಕ್ಕೆ ತೆರಳಲು ಸೂಚಿಸಿದೆ. ಈ ಇಬ್ಬರು ಅಧಿಕಾರಿಗಳ ಭಾವಚಿತ್ರವು ಪಾಕ್'ನ ವಿವಿಧ ಚಾನೆಲ್'ಗಳಲ್ಲಿ ಪ್ರಸಾರವಾಗಿದೆ. ಅಗ್ನಿಹೋತ್ರಿ ಭಾರತೀಯ ತನಿಖಾ ಸಂಸ್ಥೆ 'ರಾ'ಬಲಬೀರ್ ಸಿಂಗ್ ಇಂಟಲಿಜೆನ್ಸ್ ಬ್ಯೂರೊ'ನೊಂದಿಗೆ ಸಂಬಂಧ ಹೊಂದಿದ್ದು ಇಬ್ಬರು ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.