
ನವದೆಹಲಿ[ಆ. 28] ಭಾರತದ ಜೊತೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆಯ ಬಗ್ಗೆ ಮಾತನಾಡಬೇಕು.. ಇನ್ನು ಒಂದು ಅವಕಾಶ ಇದೆ ಎಂದು ಹೇಳುವವರು ಮೂರ್ಖರು ಎಂದು ಪಾಕಿಸ್ತಾನದ ಸಚಿವರೊಬನ್ಬರು ಹೇಳಿದ್ದಾರೆ.
ಅಕ್ಟೋಬರ್-ನವೆಂಬರ್ ವೇಳೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಪೂರ್ಣ ಪ್ರಮಾಣದ ಯುದ್ಧವೇ ನಡೆಯಲಿದೆ ಎಂದು ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.
ಇನ್ನು ಪಿಒಕೆ ನಮ್ಮ ಬಳಿ ಉಳಿಯೋದು ಕಷ್ಟ: ಬಿಲಾವಲ್ ಭುಟ್ಟೋ
ರಾವಲ್ಪಿಂಡಿಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಾಶ್ಮೀರ ವಿವಾದವನ್ನು ಬಗೆಹರಿಸಬೇಕೆಂಬ ಉದ್ದೇಶ ವಿಶ್ವಸಂಸ್ಥೆಗೆ ಇದ್ದಿದ್ದರೆ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆಗೆ ಮುಂದಾಗುತ್ತಿತ್ತು ಎಂದು ಪರೋಕ್ಷವಾಗಿ ವಿಶ್ವಸಂಸ್ಥೆಯನ್ನು ದೂರಿದ್ದಾರೆ.
ಕಾಶ್ಮೀರ ವಿಷಯದಲ್ಲಿ ಚೀನಾ ಎಂದಿಗೂ ಪಾಕಿಸ್ತಾನದ ಪರವಾಗಿಯೇ ಇರುತ್ತದೆ ಎಂದು ಇನ್ನೊಂದು ಕಡೆ ವಿಶ್ವಾಸ ವ್ಯಕ್ತಪಡಿಸಿರುವ ಸಚಿವ ಕಾಶ್ಮೀರ ವಿಚಾರ ಇದೀಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.