
ಇಸ್ಲಾಮಾಬಾದ್ (ನ.26): ಕಂಡು ಕೇಳರಿಯದ ಪ್ರತಿಭಟನೆಯೊಂದಕ್ಕೆ ಪಾಕಿಸ್ತಾನ ಸಾಕ್ಷಿಯಾಗಿದೆ. ಕಾನೂನು ಸಚಿವರ ರಾಜೀನಾಮೆಗೆ ಆಗ್ರಹಿಸಿ 2000 ಮಂದಿ ಪ್ರತಿಭಟನಾಕಾರರು, ಇಸ್ಲಾಮಾಬಾದ್ಗೆ ಸಂಪರ್ಕ ಕಲ್ಪಿಸುವ 2 ಹೆದ್ದಾರಿಗಳನ್ನು 2 ವಾರಗಳಿಂದ ಒತ್ತೆ ಇಟ್ಟುಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ತೆರವುಗೊಳಿಸುವಂತೆ ಇಸ್ಲಾಮಾಬಾದ್ ಹೈಕೋರ್ಟ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಪಾಕಿಸ್ತಾನ ಸರ್ಕಾರ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭಾರಿ ಹಿಂಸಾಚಾರ ನಡೆದಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಪ್ರವಾದಿ ಮಹಮದರೇ ಅಂತಿಮ ಧರ್ಮಗುರು ಎಂದು ಘೋಷಣೆ ಮಾಡಿಕೊಂಡು ಮತಪಟ್ಟಿಗೆ ಹೆಸರು ಸೇರಿಸಬೇಕು ಎಂಬ ನಿಯಮಕ್ಕೆ ತಿದ್ದುಪಡಿ ತಂದು, ಆ ರೀತಿ ಘೋಷಣೆ ಮಾಡಿಕೊಳ್ಳದವರಿಗೂ ಮತದಾನಕ್ಕೆ ಅವಕಾಶ ಕಲ್ಪಿಸುವ ತಿದ್ದುಪಡಿ ತರಲು ಹೊರಟ ಕಾರಣಕ್ಕಾಗಿ ಕಾನೂನು ಮಂತ್ರಿ ಜಾಹೀರ್ ಹಮೀದ್ ರಾಜೀನಾಮೆಗೆ ಕೊಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹ. ಇದಕ್ಕಾಗಿ ಇಸ್ಲಾಮಾಬಾದ್ ಎಕ್ಸ್ಪ್ರೆಸ್ ವೇ ಹಾಗೂ ಮುರ್ರೀ ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.