
ವಾಷಿಂಗ್ಟನ್(ಸೆ.25): ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಶ್ಮೀರ ವಿಚಾರವಾಗಿ ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಘೋಷಿಸಿದ್ದಾರೆ.
ಈ ಕುರಿತು ಖುದ್ದು ಮಾತನಾಡಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಮ್ಮ ನಿಲುವನ್ನು ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಭಾರತದ ಪ್ರಧಾನಿ ಅಮೆರಿಕಕ್ಕೆ ಬಂದು ವಿಶ್ವಸಂಸ್ಥೆಯಲ್ಲಿ ತಮ್ಮ ದೇಶವನ್ನು ಸಮರ್ಥವಾಗಿ ಪ್ರತಿನಿಧಿಸಿದ್ದು, ಅದಕ್ಕೆ ತದ್ವಿರುದ್ಧವಾಗಿ ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಅಮಾನವೀಯ ಕೃತ್ಯಗಳ ಕುರಿತು ಮನ ವರಿಕೆ ಮಾಡಿಕೊಡುವಲ್ಲಿ ನಾವು ಎಡವಿದೆವು ಎಂದು ಇಮ್ರಾನ್ ಖೇದ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಕಟ್ಟಿ ಹಾಕಲು ವಿಶ್ವ ಸಮುದಾಯ ನಿರಾಸಕ್ತಿ ತೋರಿದ್ದು, ಈ ಬೆಳವಣಿಗೆಯಿಂದ ತಾವು ನೊಂದಿರುವುದಾಗಿ ಇಮ್ರಾನ್ ನುಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.