ದ್ವಿಪಕ್ಷೀಯ ಒಪ್ಪಂದಗಳನ್ನು ಮುರಿದರೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತದೆ: ಭಾರತಕ್ಕೆ ಪಾಕ್ ಎಚ್ಚರಿಕೆ

Published : Oct 20, 2016, 02:32 PM ISTUpdated : Apr 11, 2018, 12:48 PM IST
ದ್ವಿಪಕ್ಷೀಯ ಒಪ್ಪಂದಗಳನ್ನು ಮುರಿದರೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತದೆ: ಭಾರತಕ್ಕೆ ಪಾಕ್ ಎಚ್ಚರಿಕೆ

ಸಾರಾಂಶ

ಈ ಹಿಂದೆ ಭಾರತವು ಎಂಟು ಬಾರಿ ಸಾರ್ಕ್ ಸಭೆಯನ್ನು ಮುಂದೂಡಿದೆ ಎಂದು ದೂರಿದ್ದಾರೆ. ಸಾರ್ಕ್ ಸಭೆ ರದ್ದುಗೊಳಿಸುವ ಪ್ರಯತ್ನ ಸೇರಿದಂತೆ ಪಾಕಿಸ್ತಾನವನ್ನು ವಿಶ್ವ ಮಟ್ಟದಲ್ಲಿ ರಾಜತಾಂತ್ರಿಕವಾಗಿ ಒಂಟಿಯಾಗಿಸುವ ಭಾರತದ ಪ್ರಯತ್ನ ಕೈಗೂಡಿಲ್ಲ ಎಂದು ಜಕಾರಿಯಾ ಅಭಿಪ್ರಾಯಪಟ್ಟಿದ್ದಾರೆ.

ಇಸ್ಲಾಮಾಬಾದ್(ಅ. 20): ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಪುನರ್’ಪರಿಶೀಲಿಸಲು ಭಾರತ ಯೋಜಿಸುತ್ತಿದೆ ಎಂಬ ಸುದ್ದಿಗೆ ಪಾಕಿಸ್ತಾನ ಖಾರವಾಗಿ ಪ್ರತಿಕ್ರಿಯಿಸಿದೆ. ಭಾರತವೇನಾದರೂ ದ್ವಿಪಕ್ಷೀಯ ಒಪ್ಪಂದ ಮುರಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ನಫೀಸ್ ಜಕಾರಿಯಾ ತಿಳಿಸಿದ್ದಾರೆಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.

ಈ ಬಾರಿಯ ಸಾರ್ಕ್ ಸಮ್ಮೇಳನವು ರದ್ದಾಗಿರುವುದು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದೆ. ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ನಫೀಸ್ ಜಕಾರಿಯಾ, ಈ ಹಿಂದೆ ಭಾರತವು ಎಂಟು ಬಾರಿ ಸಾರ್ಕ್ ಸಭೆಯನ್ನು ಮುಂದೂಡಿದೆ ಎಂದು ದೂರಿದ್ದಾರೆ. ಸಾರ್ಕ್ ಸಭೆ ರದ್ದುಗೊಳಿಸುವ ಪ್ರಯತ್ನ ಸೇರಿದಂತೆ ಪಾಕಿಸ್ತಾನವನ್ನು ವಿಶ್ವ ಮಟ್ಟದಲ್ಲಿ ರಾಜತಾಂತ್ರಿಕವಾಗಿ ಒಂಟಿಯಾಗಿಸುವ ಭಾರತದ ಪ್ರಯತ್ನ ಕೈಗೂಡಿಲ್ಲ ಎಂದು ಜಕಾರಿಯಾ ಅಭಿಪ್ರಾಯಪಟ್ಟಿದ್ದಾರೆ.

ಗಡಿ ನಿಯಮ ಉಲ್ಲಂಘನೆ ವಿಚಾರವನ್ನು ಪ್ರಸ್ತಾಪಿಸಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, 2003ರ ಕದನ ವಿರಾಮ ಉಲ್ಲಂಘನೆ ಮಾಡಿರುವ ಭಾರತಕ್ಕೆ ಪಾಕಿಸ್ತಾನವು ತಕ್ಕ ರೀತಿಯಲ್ಲಿ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ