
ಇಸ್ಲಾಮಾಬಾದ್(ಜೂ.05): ಈದ್ ಹಬ್ಬದಂದು ಶತ್ರು ಕೂಡ ಮಿತ್ರನಾಗುತ್ತಾನೆ ಎಂಬ ಮಾತಿದೆ. ಅದರಂತೆ ಭಾರತದ ವಿರುದ್ಧ ಸದಾ ಹಗೆತನ ಸಾಧಿಸುವ ಪಾಕಿಸ್ತಾನ, ಭಾರತಕ್ಕೆ ವಿಶಿಷ್ಟ ಉಡುಗೊರೆಯೊಂದನ್ನು ನೀಡಿದೆ.
ಭಾರತದ ನಾಗರಿಕ ವಿಮಾನಗಳ ಸಂಚಾರಕ್ಕೆ ತನ್ನ ವಾಯು ಪ್ರದೇಶ ಮುಕ್ತಗೊಳಿಸಿರುವ ಪಾಕಿಸ್ತಾನ, ಭಾರತಕ್ಕೆ ಈದ್ ಮುಬಾರಕ್ ಸಂದೇಶವನ್ನು ಕಳುಹಿಸಿದೆ.
ದುಬೈ-ನವದೆಹಲಿ ನಡಿವಿನ ಇಂಡಿಗೋ ವಿಮಾನ ಪಾಕಿಸ್ತಾನದ ವಾಯು ಮಾರ್ಗವಾಗಿ ಭಾರತಕ್ಕೆ ಆಗಮಿಸಿದ್ದು, ಇದಕ್ಕಾಗಿ ಪಾಕಿಸ್ತಾನ ಸಹೋದರತ್ವದ ಸಂದೇಶ ರವಾನಿಸಿದೆ.
ಪಾಕಿಸ್ತಾನದ ನಾಗರಿಕ ವಿಮಾನ ಯಾನ ನಿರ್ದೇಶನಾಲಯದ (ಸಿಎಎ) ನಿರ್ದೇಶಕರು ಇಂಡಿಗೋ ಅಧಿಕಾರಿಗಳಿಗೆ ಕರೆ ಮಾಡಿ ಈದ್ ಮುಬಾರಕ್ ತಿಳಿಸಿದ್ದಾರೆ
ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಬಾಲಾಕೋಟ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಬಳಿಕ ಉಭಯ ದೇಶಗಳು ತಮ್ಮ ವಾಯು ಪ್ರದೇಶವನ್ನು ಮುಚ್ಚಿದ್ದವು.
ಕಳೆದ ಶನಿವಾರ ಭಾರತ ತನ್ನ ವಾಯು ಪ್ರದೇಶವನ್ನು ಪಾಕಿಸ್ತಾನದ ನಾಗರಿಕ ವಿಮಾನಗಳಿಗೆ ಮುಕ್ತಗೊಳಿಸಿದ್ದು, ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ತನ್ನ ವಾಯು ಪ್ರದೇಶವನ್ನು ಭಾರತದ ನಾಗರಿಕ ವಿಮಾನಗಳಿಗೆ ಮುಕ್ತಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.