ಭಾರತದ ರಾಯಭಾರಿ ಕರೆದ ಇಫ್ತಾರ್ ಕೂಟದ ಅತಿಥಿಗಳನ್ನು ತಡೆದ ಪಾಕ್!

Published : Jun 02, 2019, 04:26 PM IST
ಭಾರತದ ರಾಯಭಾರಿ ಕರೆದ ಇಫ್ತಾರ್ ಕೂಟದ ಅತಿಥಿಗಳನ್ನು ತಡೆದ ಪಾಕ್!

ಸಾರಾಂಶ

ಪಾಕಿಸ್ತಾನ ಸ್ನೇಹ ಭಾಷೆ ಅರಿತುಕೊಳ್ಳುವುದು ಯಾವಾಗ? ಭಾರತದ ರಾಯಭಾರಿ ಕರೆದ ಇಫ್ತಾರ್ ಕೂಟದ ಅತಿಥಿಗಳನ್ನು ತಡೆದ ಪಾಕ್| ಇಸ್ಲಾಮಾಬಾದ್‌ನಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಜಯ್ ಬಿಸಾರಿಯಾ| ಹೊಟೇಲ್ ಸೆರೆನಾ ಸುತ್ತುವರೆದು ಅತಿಥಿಗಳನ್ನು ತಡೆದ ಪಾಕ್ ಅಧಿಕಾರಿಗಳು| ಭಾರತದ ರಾಯಭಾರಿ ಕರೆದಿದ್ದ ಇಫ್ತಾರ್ ಕೂಟಕ್ಕೆ ಪಾಕ್ ಭಂಗ| ಪಾಕ್‌ನಿಂದ ರಾಯಭಾರಿ ಹಕ್ಕಿನ ಉಲ್ಲಂಘನೆ ಎಂದ ಅಜಯ್ ಬಿಸಾರಿಯಾ|

ಇಸ್ಲಾಮಾಬಾದ್(ಜೂ.02): ಪಾಕಿಸ್ತಾನಕ್ಕೆ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಕರೆದಿದ್ದ ಇಫ್ತಾರ್ ಕೂಟಕ್ಕೆ ಭಂಗ ಉಂಟು ಮಾಡಿರುವ ಪಾಕಿಸ್ತಾನ, ಇಫ್ತಾರ್ ಕೂಟದ ಅತಿಥಿಗಳನ್ನು ತಡೆದು ಉದ್ಘಟತನ ಮೆರೆದಿದೆ.

ಇಸ್ಲಾಮಾಬಾದ್‌ನಲ್ಲಿರುವ ಹೋಟೆಲ್ ಸೆರೆನಾದಲ್ಲಿ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಆದರೆ ಸೆರೆನಾ ಹೋಟೆಲ್‌ನ್ನು ಸುತ್ತುವರೆದ ಪಾಕ್ ಅಧಿಕಾರಿಗಳು, ಇಫ್ತಾರ್ ಕೂಟಕ್ಕೆ ಬಂದ ಅತಥಿಗಳನ್ನು ವಾಪಸ್ ಕಳುಹಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಜಯ್ ಬಿಸಾರಿಯಾ, ಪಾಕ್‌ನ ಈ ನಡೆ ರಾಯಭಾರಿ ಹಕ್ಕಿನ ಉಲ್ಲಂಘನೆಯಾಗಿದ್ದು, ಇಂತಹ ನಡುವಳಿಕೆ ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಧಕ್ಕೆ ತರುತ್ತದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!