
ಇಸ್ಲಾಮಾಬಾದ್ (ನ.27): ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ಪಾಕಿಸ್ತಾನ ನಿಲ್ಲಿಸಿದೆ.
ಭಾರತದಿಂದ ಬರುವ ಕೃಷಿ ಉತ್ಪನ್ನಗಳು ವಾಘಾ ಗಡಿ ದಾಟಿ ನಂತರ ಕರಾಚಿ ಬಂದರಿಗೆ ಬರಬೇಕು. ಜೊತೆಗೆ ಅಲ್ಲಿಂದ ಅನುಮತಿ ಪಡೆದು ಮುಂದಿನ ಸ್ಥಳಗಳಿಗೆ ಕಳುಹಿಸಬೇಕಾಗುತ್ತದೆ ಎಂದು ಡಾನ್ ವರದಿ ಮಾಡಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಲಿಖಿತ ಆದೇಶವಿಲ್ಲದೇ ಭಾರತದಿಂದ ಕೃಷಿ ಪದಾರ್ಥಗಳ ಆಮದು ಸಾಧ್ಯವಿಲ್ಲ, ಹೀಗಾಗಿ ಭಾರತದ ಕೃಷಿ ಉತ್ಪನ್ನಗಳ ಆಮದನ್ನು ನಿಲ್ಲಿಸಲಾಗಿದೆ ಎಂದು ಸಸ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.