
ಲಾಹೋರ್[ಜೂ.11]: ಕಿರ್ಗಿಸ್ತಾನದ ರಾಜಧಾನಿ ಬಿಷ್ಕೇಕ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವು ತನ್ನ ವಾಯು ನೆಲೆ ಮೂಲಕ ಹಾದು ಹೋಗಲು ಪಾಕಿಸ್ತಾನ ಅನುಮತಿ ನೀಡಿದೆ.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಾಕೋಟ್ಗೆ ನುಗ್ಗಿ ಅಲ್ಲಿ ನೆಲೆಸಿದ್ದ ಜೈಷ್-ಎ-ಮೊಹಮ್ಮದ್ ಉಗ್ರರನ್ನು ಸಂಹಾರ ಮಾಡಿತ್ತು. ಇದರಿಂದ ಕ್ರೋಧಗೊಂಡಿದ್ದ ಪಾಕಿಸ್ತಾನ, ಫೆ.26ರಿಂದ ತನ್ನ ವಾಯುನೆಲೆಗೆ ಭಾರತದ ಯಾವುದೇ ವಿಮಾನಗಳು ಪ್ರವೇಶಿಸದಂತೆ ನಿರ್ಬಂಧ ಹೇರಿದೆ.
ಆದಾಗ್ಯೂ, ಜೂ.13-14ರವರೆಗೆ ಕಿರ್ಗಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಕ್ಕೆ ತೆರಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿದ ಭಾರತದ ಮನವಿಯನ್ನು ಪಾಕಿಸ್ತಾನ ಪುರಸ್ಕರಿಸಿದೆ. ಈ ಮೂಲಕ ಭಾರತದ ಜೊತೆ ಶಾಂತಿ ಮಾತುಕತೆಗೆ ಸಿದ್ಧ ಎಂಬ ಸಂದೇಶವನ್ನು ರವಾನಿಸಲು ಪಾಕಿಸ್ತಾನ ಯತ್ನಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.