ನಮ್ಮ ಮೇಲೆ ದಾಳಿ ಮಾಡಿದರೆ ಪ್ರತಿಕಾರಕ್ಕೆ ಸಿದ್ದವೆಂದ ಪಾಕ್

Published : Feb 12, 2018, 04:33 PM ISTUpdated : Apr 11, 2018, 01:09 PM IST
ನಮ್ಮ ಮೇಲೆ ದಾಳಿ ಮಾಡಿದರೆ ಪ್ರತಿಕಾರಕ್ಕೆ ಸಿದ್ದವೆಂದ ಪಾಕ್

ಸಾರಾಂಶ

ಅಂತರರಾಷ್ಟ್ರೀಯ ಸಮುದಾಯ ಭಾರತ ಗಡಿನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ದುಷ್ಕೃತ್ಯಗಳು ಹಾಗೂ ಮಾನವ ಹಕ್ಕು ಉಲ್ಲಂಘನೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯಿದೆ'

ಇಸ್ಲಾಮಾಬಾದ್/ಶ್ರೀನಗರ(ಫೆ.12): ಭಾರತೀಯ ಸೇನೆ ಅನಾವಶ್ಯಕವಾಗಿ ನಮ್ಮ ಮೇಲೆ ಆರೋಪಿಸಿ ಗಡಿ ನಿಯಂತ್ರಣ ರೇಖೆಗಳಲ್ಲಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ' ಪಾಕ್ ಭಾರತೀಯ ಸೇನೆಗೆ ಎಚ್ಚರಿಕೆ ನೀಡಿದೆ.

ತನಿಖೆಯನ್ನು ಪ್ರಾರಂಭಿಸಿದರೂ ಸಹ ಭಾರತೀಯ ಅಧಿಕಾರಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ಹಾಗೂ ನಿರಾಧಾರ ಆರೋಪಗಳನ್ನು ಮಾಡುತ್ತಾರೆ. ಕಾಶ್ಮೀರದಲ್ಲಿ ಶಸ್ತ್ರಸಜ್ಜಿತ ದಂಗೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಯಾವುದೇ ಹುರುಳಿಲ್ಲದೆ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತದೆ. ಗಡಿ ನಿಯಂತ್ರಣ ರೇಖೆಯಲ್ಲಿ ನಮ್ಮ ಸೇನೆಯ ಮೇಲೆ ಇನ್ನು ಮುಂದೆ ದಾಳಿ ನಡೆಸಿದರೆ ಪ್ರತಿಕಾರ ಕ್ರಮಕ್ಕೆ ನಾವು ಸಿದ್ದರಾಗಬೇಕಾಗುತ್ತದೆ' ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ಪ್ರಕಟಣೆ ತಿಳಿಸಿದೆ.

ಅಂತರರಾಷ್ಟ್ರೀಯ ಸಮುದಾಯ ಭಾರತ ಗಡಿನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ದುಷ್ಕೃತ್ಯಗಳು ಹಾಗೂ ಮಾನವ ಹಕ್ಕು ಉಲ್ಲಂಘನೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯಿದೆ' ಎಂದು ತಿಳಿಸಿದೆ.    

ಕೆಲವು ದಿನಗಳ ಹಿಂದೆ ಜಮ್ಮುವಿನ ಶುನ್ಜುವಾನ್ ಕ್ಯಾಂಪ್'ನಲ್ಲಿ ನಡೆದ ದಾಳಿಯಲ್ಲಿ ಐವರು ಸೈನಿಕರು ಹಾಗೂ ಓರ್ವ ಸೈನಿಕನ ತಂದೆ ಹುತಾತ್ಮರಾಗಿ ಅನೇಕ ಮಕ್ಕಳು ಹಾಗೂ ಮಹಿಳೆಯರು ಗಾಯಗೊಂಡಿದ್ದರು. ಈ ಘಟನೆಗೆ ಪಾಕ್ ಮೂಲದ ಉಗ್ರ ಸಂಘಟನೆ ಜೈಶ್ ಎ ಮೊಹಮದ್ ಪ್ರಮುಖ ಕಾರಣವಾಗಿದ್ದು, ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಜೈಶ್ ಕಾರಣವೆಂದು ಭಾರತ ಆಧಾರ ಸಹಿತ ದಾಖಲೆಗಳನ್ನು ವಿಶ್ವ ಸಮುದಾಯಕ್ಕೆ ತಳಿಸುತ್ತಾ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ: ಇಕ್ಬಾಲ್
ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌: ಬಿಜೆಪಿಗೇ 82%!