ಪಾಕ್ ಹೈಕಮಿಷನರ್‌ಗೆ ಸಮನ್ಸ್ ಜಾರಿ: ಭಾರತದ ಹೈಕಮಿಷನರ್‌ಗೆ ಬುಲಾವ್!

By Web DeskFirst Published Feb 15, 2019, 5:26 PM IST
Highlights

ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆ| ಪಾಕ್ ಹೈಕಮಿಷನರ್‌ಗೆ ಸಮನ್ಸ್ ಜಾರಿ| ಸೋಹೆಲ್ ಮಹೆಮೂದ್‌ಗೆ ಸಮನ್ಸ್ ಜಾರಿ ಮಾಡಿದ ವಿದೇಶಾಂಗ ಕಾರ್ಯದರ್ಶಿ| ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್‌ಗೆ ದೆಹಲಿಗೆ ಬರುವಂತೆ ಆದೇಶ| ಅಜಯ್ ಬಿಸಾರಿಯಾ ಅವರಿಗೆ ತುರ್ತಾಗಿ ದೆಹಲಿಗೆ ವಾಪಸ್ ಮರಳುವಂತೆ ಬುಲಾವ್|

ನವದೆಹಲಿ(ಫೆ.15): ಮಹತ್ವದ ಬೆಳವಣಿಗೆಯೊಂದರಲ್ಲಿ ಪುಲ್ವಾಮಾ ಭಯೋತ್ಪಾದಕರ ದಾಳಿಗೆ ಸಂಬಂಧಿಸಿದಂತೆ, ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಸೋಹೆಲ್ ಮೆಹಮೂದ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದೇ ವೇಳೆ ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅವರಿಗೆ ದೆಹಲಿಗೆ ಮರಳುವಂತೆ ಆದೇಶ ನೀಡಲಾಗಿದೆ.

India lodged a strong protest against Pakistan as its High Commissioner to India, Sohail Mahmood, was summoned by Foreign Secretary Vijay Gokhale in connection with the Pulwama terror attack

Read Story | https://t.co/5OHbkezyQu pic.twitter.com/JXT7Qkrktz

— ANI Digital (@ani_digital)

ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹ್ಮದ್ ಭಯೋತ್ಪಾದಕ ಸಂಘಟನೆಯ ಕೈವಾಡ ಇರುವ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಹೈಕಮಿಷನರ್ ಅವರಿಗೆ ವಿದೇಶಾಂಗ ಕಾರ್ಯದರ್ಶಿ ವಿಜಯ್ ಘೋಖಲೆ ಸಮನ್ಸ್ ಜಾರಿ ಮಾಡಿ ಮಾತುಕತೆಗೆ ಬರುವಂತೆ ಆದೇಶಿಸಿದ್ದಾರೆ.

Sources to ANI: Indian High Commissioner to Pakistan Ajay Bisaria has been called to Delhi for consultations in the wake of yesterday's . (file pic) pic.twitter.com/lYjHQKEhuC

— ANI (@ANI)

ಇದೇ ವೇಳೆ ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಅವರಿಗೆ ತುರ್ತಾಗಿ ದೆಹಲಿಗೆ ವಾಪಸ್ ಮರಳುವಂತೆ ಆದೇಶ ನೀಡಲಾಗಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

click me!