ಪಾಕ್ ಹೈಕಮಿಷನರ್‌ಗೆ ಸಮನ್ಸ್ ಜಾರಿ: ಭಾರತದ ಹೈಕಮಿಷನರ್‌ಗೆ ಬುಲಾವ್!

Published : Feb 15, 2019, 05:26 PM IST
ಪಾಕ್ ಹೈಕಮಿಷನರ್‌ಗೆ ಸಮನ್ಸ್ ಜಾರಿ: ಭಾರತದ ಹೈಕಮಿಷನರ್‌ಗೆ ಬುಲಾವ್!

ಸಾರಾಂಶ

ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆ| ಪಾಕ್ ಹೈಕಮಿಷನರ್‌ಗೆ ಸಮನ್ಸ್ ಜಾರಿ| ಸೋಹೆಲ್ ಮಹೆಮೂದ್‌ಗೆ ಸಮನ್ಸ್ ಜಾರಿ ಮಾಡಿದ ವಿದೇಶಾಂಗ ಕಾರ್ಯದರ್ಶಿ| ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್‌ಗೆ ದೆಹಲಿಗೆ ಬರುವಂತೆ ಆದೇಶ| ಅಜಯ್ ಬಿಸಾರಿಯಾ ಅವರಿಗೆ ತುರ್ತಾಗಿ ದೆಹಲಿಗೆ ವಾಪಸ್ ಮರಳುವಂತೆ ಬುಲಾವ್|

ನವದೆಹಲಿ(ಫೆ.15): ಮಹತ್ವದ ಬೆಳವಣಿಗೆಯೊಂದರಲ್ಲಿ ಪುಲ್ವಾಮಾ ಭಯೋತ್ಪಾದಕರ ದಾಳಿಗೆ ಸಂಬಂಧಿಸಿದಂತೆ, ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಸೋಹೆಲ್ ಮೆಹಮೂದ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದೇ ವೇಳೆ ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅವರಿಗೆ ದೆಹಲಿಗೆ ಮರಳುವಂತೆ ಆದೇಶ ನೀಡಲಾಗಿದೆ.

ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹ್ಮದ್ ಭಯೋತ್ಪಾದಕ ಸಂಘಟನೆಯ ಕೈವಾಡ ಇರುವ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಹೈಕಮಿಷನರ್ ಅವರಿಗೆ ವಿದೇಶಾಂಗ ಕಾರ್ಯದರ್ಶಿ ವಿಜಯ್ ಘೋಖಲೆ ಸಮನ್ಸ್ ಜಾರಿ ಮಾಡಿ ಮಾತುಕತೆಗೆ ಬರುವಂತೆ ಆದೇಶಿಸಿದ್ದಾರೆ.

ಇದೇ ವೇಳೆ ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಅವರಿಗೆ ತುರ್ತಾಗಿ ದೆಹಲಿಗೆ ವಾಪಸ್ ಮರಳುವಂತೆ ಆದೇಶ ನೀಡಲಾಗಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ