
ತಿರುವನಂತಪುರಂ: ಇಲ್ಲಿನ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಹುಂಡಿಯಲ್ಲಿ ಪಾಕಿಸ್ತಾನದ 20ರು. ವೌಲ್ಯದ ನೋಟೊಂದು ಪತ್ತೆಯಾಗಿದೆ. ಬೇರೆ ಬೇರೆ ದೇಶಗಳ ನೋಟು ಪತ್ತೆಯಾಗುವುದು ಸಾಮಾನ್ಯವಾದರೂ, ಇದು ಪಾಕಿಸ್ತಾನಕ್ಕೆ ಸೇರಿದ ನೋಟಾದ ಕಾರಣ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾರೋ ಕಿಡಿಗೇಡಿಗಳು ಬೇಕಂತಲೇ ಈ ಕೃತ್ಯ ಎಸಗಿದ್ದರೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರಾದರೂ ಪ್ರಕರಣವನ್ನು ಕೂಲಂಕಶವಾಗಿ ಎಲ್ಲಾ ಸ್ತರಗಳಲ್ಲಿ ಅವಲೋಕಿಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ, ಪಾಕಿಸ್ತಾನದ ಕರೆನ್ಸಿಯ ನೋಟು ಈ ದೇವಸ್ಥಾನದಲ್ಲಿ ಸಿಕ್ಕಿರುವುದು ಇದೇ ಮೊದಲು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.