
ನವದೆಹಲಿ (ಡಿ.18): ಭಾರತದ ರಹಸ್ಯ ಮಾಹಿತಿಗಳನ್ನು ಪಡೆಯುವ ಸಲುವಾಗಿ, ಇಸ್ಲಾಮಾಬಾದ್’ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಂಚು ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ಆದರೆ ಮಾಹಿತಿ ತಿಳಿಯುತ್ತಲೇ ಭಾರತೀಯ ಗುಪ್ತಚರ ಇಲಾಖೆ, ಈ ಮಾಹಿತಿಯನ್ನು ಪಾಕ್’ನಲ್ಲಿನ ಭಾರತೀಯ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ರವಾನಿಸುವ ಮೂಲಕ ಐಎಸ್ಐ ಸಂಚನ್ನು ವಿಫಲಗೊಳಿಸಿದ್ದಾರೆ.
ಈ ನಡುವೆ ಹನಿಟ್ರ್ಯಾಪ್ ಜಾಲದ ಸುಳಿಯಲ್ಲಿ ಸಿಕ್ಕಿದ್ದರು ಎನ್ನಲಾದ ಮೂವರು ಕಿರಿಯ ಅಧಿಕಾರಿಗಳು, ಭಾರತಕ್ಕೆ ಮರಳಿದ್ದು, ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ಈ ಅಧಿಕಾರಿಗಳು ಯಾವುದೇ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿಲ್ಲ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.