
ಚೆನ್ನೈ( ಫೆ.08): ತಮಿಳುನಾಡು ರಾಜಕೀಯದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಷ್ಟು ಇನ್ನಷ್ಟು ಬಿಗಡಾಯಿಸಿದ್ದು ನಟ ಕಮಲ್ ಹಸನ್ ತನ್ನ ಸಹ ನಟರಿಗೆ ಸರಿಯಾದ ನಿಲುವು ತೆಗೆದುಕೊಳ್ಳುವಂತೆ ಪ್ರೇರೇಪಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ರಾಜಿನಾಮೆ ನೀಡಿದ್ದು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸಿಎಂ ಆಗಲು ಹೊರಟಿರುವುದು, ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಬಂಡಾಯವೆದ್ದಿದ್ದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಇದಕ್ಕೆ ಚಲನಚಿತ್ರರಂಗದವರು ಭಾಗಿಯಾಗಿದ್ದು, ಕಮಲ್ ಹಸನ್ ತನ್ನ ಸಹಕಲಾವಿದರಿಗೆ ಸರಿಯಾದ ನಿಲುವು ತೆಗೆದುಕೊಳ್ಳಿ ಎಂದು ಉತ್ತೇಜಿಸಿದ್ದಾರೆ.
ಕಮಲ್ ಹಸನ್ ಖ್ಯಾತ ನಟ ಮಾಧವನ್ ಗೆ, ತಮಿಳುನಾಡು ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮಾತನಾಡಿ. ನೀವು ಒಪ್ಪಿಕೊಳ್ಳದೇ ಇರಬಹುದು ಆದರೆ ಧ್ವನಿಯೆತ್ತಿ ಎಂದು ಟ್ವೀಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.