
ಬೆಂಗಳೂರು (ಫೆ.15): ಪರಪ್ಪನ ಅಗ್ರಹಾರದ ಮುಂದೆ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಬಲಿಗರಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. 5 ಸ್ಕಾರ್ಪಿಯೋ , 1 ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ.
ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಪರಿಸ್ಥಿತಿ ಬಿಗಡಾಯಿಸಿದೆ.
ಶಶಿಕಲಾಗೆ ಕೈದಿ ನಂ. 1071, ಇಳವರಿಸಿಗೆ ಕೈದಿ ನಂ 10712 ಎಂದು ಗುರುತಿಸಲಾಗಿದೆ. ನನಗೆ ಶುಗರ್ ಇದೆ ಎಂದು ಹೇಳಿರುವ ಶಶಿಕಲಾ ನ್ಯಾಯಾಧೀಶರ ಮುಂದೆ ಮನೆ ಊಟಕ್ಕೆ ಅವಕಾಶ ಕೋರಿದ್ದರು. ಆದರೆ ಶಶಿಕಲಾ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.