
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಮುಂದಿನ ಚುನಾವಣೆಯಲ್ಲಿ ಕಟ್ಟಕಡೆಯ ಬಾರಿಗೆ ಸ್ಪರ್ಧಿಸಲಿದ್ದು, ಅನಂತರ ಅವರು ಚುನಾವಣಾ ರಾಜಕೀಯದಿಂದ ದೂರವುಳಿಯುವ ಚಿಂತನೆ ಹೊಂದಿದ್ದಾರೆ ಎಂದು ಎನ್ನಲಾಗುತ್ತಿದೆ.
ಇಂತಹ ಯಾವ ಉದ್ದೇಶ ನನಗಿಲ್ಲ. ಯಾರೋ ಇಂತಹ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಆದರೆ, ನಾನು ಇಂತಹ ಯಾವುದೇ ಚಿಂತನೆ ಹೊಂದಿಲ್ಲ. ಇದ್ದಿದ್ದರೆ ನಾನೇ ಹೇಳುತ್ತಿದ್ದೆ.
ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ
ಆದರೆ, ಖುದ್ದು ಪರಮೇಶ್ವರ್ ಅವರು ಇದನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಪರಮೇಶ್ವರ್ ಅವರು ತಮ್ಮ ಆಪ್ತರ ಬಳಿ ಇಂತಹ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ಚುನಾವಣೆಯ ನಂತರ ತಮ್ಮ ವೈದ್ಯಕೀಯ ಕಾಲೇಜಿನ ವ್ಯವಹಾರಗಳಲ್ಲಿ ವ್ಯಸ್ತರಾಗುವುದಾಗಿ ಆಪ್ತರ ಮುಂದೆ ಹೇಳಿದ್ದಾರೆ (ಈ ಆಪ್ತರು ಯಾರು ಎಂಬುದು ಗೊತ್ತಿಲ್ಲ!) ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು.
ಆದರೆ, ಇದನ್ನು ‘ಕನ್ನಡಪ್ರಭಕ್ಕೆ’ ಸ್ಪಷ್ಟವಾಗಿ ನಿರಾಕರಿಸಿರುವ ಪರಮೇಶ್ವರ್ ಅವರು, ‘ಅಂತಹ ಉದ್ದೇಶವಿದ್ದಿದ್ದರೆ ನಾನೇ ಮಾಧ್ಯಮಗಳ ಮುಂದೆ ಸ್ಪಷ್ಟವಾಗಿ ಹೇಳುತ್ತಿದ್ದೆ. ಅದೆಲ್ಲ ಸುಳ್ಳು. ಇಂತಹ ಯಾವ ಉದ್ದೇಶ ನನಗಿಲ್ಲ. ಯಾರೋ ಇಂತಹ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಆದರೆ, ತಾವು ಇಂತಹ ಯಾವುದೇ ಚಿಂತನೆ ಹೊಂದಿಲ್ಲ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.