ಮತ್ತೆ ಪಿಎಸ್‌ಐಗೆ ಶಾಸಕ ಧಮ್ಕಿ

Published : Apr 01, 2018, 07:38 AM ISTUpdated : Apr 14, 2018, 01:14 PM IST
ಮತ್ತೆ ಪಿಎಸ್‌ಐಗೆ ಶಾಸಕ ಧಮ್ಕಿ

ಸಾರಾಂಶ

ಇದರಿಂದ ಆಕ್ರೋಶಗೊಂಡ ನೂರಾರು ಜನರು, ಸಚಿವ ಸ್ಥಾನ ಕಳೆದುಕೊಂಡರೂ ಬುದ್ಧಿ ಕಲಿಯದ ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಹೂವಿನಹಡಗಲಿ: ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ ಈಗ ಅದೇ ಮಾದರಿಯಲ್ಲಿ ಹಿರೇಹಡಗಲಿ ಠಾಣೆಯ ಪಿಎಸ್‌ಐ ರಾಘವೇಂದ್ರ ಅವರಿಗೂ ಧಮ್ಕಿ ಹಾಕಿ ಹೊಸ ವಿವಾದ ಮೈಮೇಲೆ ಎಳೆದು ಕೊಂಡಿದ್ದಾರೆ.

ಇದರಿಂದ ಆಕ್ರೋಶಗೊಂಡ ನೂರಾರು ಜನರು, ಸಚಿವ ಸ್ಥಾನ ಕಳೆದುಕೊಂಡರೂ ಬುದ್ಧಿ ಕಲಿಯದ ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ತಾಲೂಕಿನ ಕುರುವತ್ತಿ ಗ್ರಾಮದಲ್ಲಿ ಸಹೋದರ ಸಂಬಂಧಿಗಳು ಪರಸ್ಪರ ಜಗಳ ಮಾಡಿಕೊಂಡು ಠಾಣೆಗೆ ಬಂದಾಗ ಬುದ್ದಿ ಹೇಳಲೆಂದು ಒಬ್ಬರಿಗೆ ಪಿಎಸ್‌ಐ ರಾಘವೇಂದ್ರ ಹೊಡೆದಿದ್ದಾರೆ.

ಈ ವಿಷಯ ತಿಳಿದ ಶಾಸಕರು, ಠಾಣೆಗೆ ಧಾವಿಸಿ ಕರ್ತವ್ಯದಲ್ಲಿದ್ದ ಪಿಎಸ್‌ಐ ರಾಘವೇಂದ್ರ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇನ್ನು ಮುಂದೆ ನಮ್ಮವರ ಮೇಲೆ ಕೈ ಮಾಡಿದರೆ ನಿನ್ನ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಆದರೆ, ಪಿಎಸ್‌ಐ ರಾಘವೇಂದ್ರ ಅವರೇ ಅಂತಹದ್ದೇನೂ ಆಗಿಲ್ಲ ಎಂದು ಹೇಳಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು