
ಬೆಂಗಳೂರು(ಮೇ.10): ಆರ್ಟಿಇ ಅಡಿ ಅಡ್ಮಿಷನ್ ಮಾಡಿಸಿಕೊಳ್ಳದ ರಾಜರಾಜೇಶ್ವರಿ ನಗರದಲ್ಲಿರುವ ಇಂಧನ ಸಚಿವ ಡಿ.ಕೆ.ಶಿವುಕುಮಾರ್ ಅವರ ಒಡೆತನಕ್ಕೆ ಸೇರಿದ ನ್ಯಾಷನಲ್ ಹಿಲ್ ವಿವ್ಯು ಶಾಲೆ ಎದುರು ಮಕ್ಕಳ ಪೋಷಕರು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ನೇಮಕ ಮಾಡಿಕೊಳ್ಳಲು ಇಂದು ಕೊನೆಯ ದಿನವಾಗಿದೆ. ಆದರೆ ಆರ್ಟಿಇ ಅಡಿಯಲ್ಲಿ ಸೀಟು ನೀಡದಂತೆ ಆಡಳಿತ ಮಂಡಳಿ ನಿರ್ದೇಶನ ನೀಡಲಾಗಿದೆ. ಸ್ಥಳೀಯ ಬಿಇಓ ಅಧಿಕಾರಿ ಈ ಬಗ್ಗೆ ತಿಳಿಯಲು ಹೋದರೆ ಶಾಲಾ ಆಡಳಿತ ಮಂಡಳಿ ಒಳಗೆ ಬಿಟ್ಟುಕೊಳ್ಳಲಿಲ್ಲ. ನಂತರ ಶಾಲೆಗೆ ಹೋಗಿ ಮಾಹಿತಿ ಪಡೆದ ಬಿಇಒ ಯಾವುದೇ ಆರ್'ಟಿಇ ಅಡಿಯಲ್ಲಿ ಮಕ್ಕಳನ್ನು ನೇಮಿಸಿಕೊಳ್ಳದಂತೆ ಸಚಿವರೆ ನಿರ್ದೇಶನ ನೀಡಿದ್ದಾರೆ. ಎಲ್ಕೆಜಿಗೆ ಪ್ರವೇಶ ಪಡೆದಿದ್ದ ಆರ್ಟಿಇ ವಿದ್ಯಾರ್ಥಿಗಳನ್ನು 1ನೇ ತರಗತಿಯಲ್ಲಿ ಪ್ರವೇಶ ಸಂಖ್ಯೆ ಕಡಿಮೆ ಇರುವ ಕಾರಣ ಪ್ರವೇಶ ನೀಡಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.