
ನವದೆಹಲಿ[ಜು.09]: ಬ್ಯಾಂಕ್ ಖಾತೆ ತೆರೆಯಲು ಮತ್ತು ಮೊಬೈಲ್ ಸಿಮ್ ಕಾರ್ಡ್ ಪಡೆಯಲು ಆಧಾರ್ ಅನ್ನು ಕಡ್ಡಾಯ ಎಂಬುದರ ಬದಲಾಗಿ ಐಚ್ಛಿಗೊಳಿಸುವ ಮಸೂದೆಗೆ ಸಂಸತ್ ಸೋಮವಾರ ಅನುಮೋದನೆ ನೀಡಿದೆ.
ಆಧಾರ್ ಮತ್ತು ಇತರ ತಿದ್ದುಪಡಿ ಮಸೂದೆ- 2019ಕ್ಕೆ ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅನುಮೋದನೆ ನೀಡಲಾಯಿತು. ಈ ಮಸೂದೆಗೆ ಜುಲೈ 4ರಂದು ಲೋಕಸಭೆ ಅನುಮೋದನೆ ನೀಡಿತ್ತು. ಹೊಸ ಮಸೂದೆ ಅನ್ವಯ ಖಾಸಗಿ ಕಂಪನಿಗಳು ಆಧಾರ್ ದತ್ತಾಂಶ ಸೋರಿಕೆ ಮಾಡಿದರೆ ಅಥವಾ ನಿಯಮಗಳನ್ನು ಉಲ್ಲಂಘಿಸಿದರೆ 1 ಕೋಟಿ ರು.ವರೆಗೂ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವುದಕ್ಕೂ ಅವಕಾಶ ಇದೆ.
ಹೀಗಾಗಿ ಈ ಮಸೂದೆ ಕಾಯ್ದೆಯಾಗಿ ಜಾರಿಯಾಗಲು ರಾಷ್ಟ್ರಪತಿಗಳ ಅಂಗೀಕಾರವೊಂದೇ ಬಾಕಿ ಉಳಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.