
ನವದೆಹಲಿ (ಮಾ.30): ಹಣಕಾಸು ಮಸೂದೆ-2017'ಗೆ ರಾಜ್ಯಸಭೆಯು ಮಾಡಿರುವ ತಿದ್ದುಪಡಿಗಳನ್ನು ಪರಿಗಣಿಸದೇ ಲೋಕಸಭೆಯು ಮಸೂದೆಗೆ ಇಂದು ಅನುಮೋದನೆ ನೀಡಿದೆ.
ರಾಜ್ಯಸಭೆಯು ಮಾಡಿರುವ ತಿದ್ದುಪಡಿಗಳು ಸ್ವೀಕಾರಾರ್ಹವಲ್ಲವೆಂದು ಈ ಸಂದರ್ಭದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ರಾಜ್ಯಸಭೆಯು ಮಾಡಿರುವ ತಿದ್ದುಪಡಿಗಳನ್ನು ಬೆಂಬಲಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ದೀಪೇಂದ್ರ ಹೂಡಾ, ಬೇರೆ ಬೇರೆ ಕಾನೂನಗಳಿಗೆ ಹಣಕಾಸು ಮಸೂದೆಯ ಮೂಲಕ ತಿದ್ದುಪಡಿ ಮಾಡುವ ಸರ್ಕಾರದ ಪ್ರಯತ್ನವನ್ನು ವಿರೋಧಿಸಿದರು.
ರಾಜಕೀಯ ಪಕ್ಷಗಳ ದೇಣಿಗೆಗೆ ಸಂಬಂಧಿಸಿ ಪ್ರತ್ಯೇಕ ಕಾನೂನನ್ನು ಜಾರಿಗೊಳಿಸಬೇಕೆಂದು ಅವರು ಆಗ್ರಹಿದರು.
ರಾಜ್ಯಸಭೆಯು ನಿನ್ನೆ ಐದು ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆಯನ್ನು ಹಿಂತಿರುಗಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.