ಏಕ ಶ್ರೇಣಿ ಏಕ ಪಿಂಚಣಿಗಾಗಿ ಸೈನಿಕರು ಎದುರಿಸುತ್ತಿರುವ ಸಮಸ್ಯೆಗೆ ಶೀಘ್ರ ಪರಿಹಾರ

Published : Nov 05, 2016, 03:37 PM ISTUpdated : Apr 11, 2018, 12:35 PM IST
ಏಕ ಶ್ರೇಣಿ ಏಕ ಪಿಂಚಣಿಗಾಗಿ ಸೈನಿಕರು ಎದುರಿಸುತ್ತಿರುವ ಸಮಸ್ಯೆಗೆ ಶೀಘ್ರ ಪರಿಹಾರ

ಸಾರಾಂಶ

ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯಡಿ ಸೇವಾ ನಿವೃತ್ತರು ಪರಿಷ್ಕೃತ ಪಿಂಚಣಿ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು 2 ತಿಂಗಳೊಳಗಾಗಿ ಬಗೆಹರಿಸಲಾಗುವುದು ಎಂದು ರಕ್ಷಣಾ ಸಚಿವ ಮನೋಹರ್ ಪಾರಿಕರ್ ಭರವಸೆ ನೀಡಿದ್ದಾರೆ.

ಶಿರೋಡ,ಗೋವಾ (ನ.05): ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯಡಿ ಸೇವಾ ನಿವೃತ್ತರು ಪರಿಷ್ಕೃತ ಪಿಂಚಣಿ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು 2 ತಿಂಗಳೊಳಗಾಗಿ ಬಗೆಹರಿಸಲಾಗುವುದು ಎಂದು ರಕ್ಷಣಾ ಸಚಿವ ಮನೋಹರ್ ಪಾರಿಕರ್ ಭರವಸೆ ನೀಡಿದ್ದಾರೆ.

ಕಳೆದ 43 ವರ್ಷಗಳಿಂದ ಏಕಶ್ರೇಣಿ ಏಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಇದಕ್ಕೆ ಸರ್ಕಾರ ಕೂಡಾ ಒಪ್ಪಿದೆ. ಸಂಸತ್ತಿನಲ್ಲಿ ಒಪ್ಪಿಗೆ ದೊರೆತ ಮೇಲೆ 7.11.2015 ರನ್ವಯ ಆದೇಶ ಜಾರಿಗೆ ಬರಲಿದೆ. ಶೇ.95 ರಷ್ಟು ಸೈನಿಕರು ಇದರ ಪ್ರಯೋಜನ ಪಡೆದಿದ್ದಾರೆ. ಶೇ.5 ರಷ್ಟು ಹಿರಿಯ ಸೈನಿಕರಿಗೆ ಇದು ದೊರೆತಿಲ್ಲ. ಅವರಿಗೂ ಶೀಘ್ರದಲ್ಲಿಯೇ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಪಾರಿಕರ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌