
ನವದೆಹಲಿ (ಆ.18): ದೇಶದ ರಕ್ಷಣಾ ಮಂತ್ರಿಯ ಹುದ್ದೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಗೋವಾ ಸಿಎಂ ಮನೋಹರ್ ಪರ್ರಿಕರ್ ಇದನ್ನು ಗಂಭಿರವಾಗಿ ತೆಗೆದುಕೊಳ್ಳದೇ ಇದ್ದಿದ್ದರಿಂದ ಅವರ ಕಾಲಾವಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಗುಡುಗಿದ್ದಾರೆ.
ಪರ್ರಿಕರ್ ಅವರು ರಕ್ಷಣಾ ಮಂತ್ರಿಯಾಗಿದ್ದಾಗ ತಮ್ಮ ಹುದ್ದೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ. ಗೋವಾ ಉಪ ಚುನಾವಣೆಯಲ್ಲಿ ತಾನು ಸೋತರೆ ಮತ್ತೆ ರಕ್ಷಣಾ ಮಂತ್ರಿಯಾಗುತ್ತೇನೆ ಎಂದಿದ್ದರು. ಇದನ್ನು ಕೇಳಿ ನಮಗೆಲ್ಲಾ ಆಘಾತ! ಒಂದು ವೇಳೆ ಅವರು ರಕ್ಷಣಾ ಮಂತ್ರಿಯಾದರೆ ದೇಶದಲ್ಲಿ ಅವ್ಯವಸ್ಥೆ ಉಂಟಾಗುತ್ತದೆ ಎಂದಿದ್ದಾರೆ. ಅದೇ ರೀತಿ ಪೂರ್ಣಾವಧಿ ರಕ್ಷಣಾ ಮಂತ್ರಿಯನ್ನು ನೇಮಕ ಮಾಡದೇ ಇರುವುದಕ್ಕೆ ಠಾಕ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.